Kodagu: Heavy rains disrupt normal life
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆರಿದ್ರಾ ಮಳೆಯ ಅಬ್ಬರಕ್ಕೆ ಜನಜೀವನ ತತ್ತರಿಸಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕೊಡಗಿನ ಪಶ್ಚಿಮಘಟ್ಟ ವ್ಯಾಪ್ತಿಯ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ, ಹುದಿಕೇರಿ, ಬಿ.ಶೆಟ್ಟಿಗೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗಿದೆ. ರಸ್ತೆ ನಡುವೆ ನದಿಯಂತೆ ನೀರು ಹರಿದಿದೆ. ಬಿರುನಾಣಿ-ಹುದಿಕೇರಿ ರಸ್ತೆಯ ಹೈಸೊಡ್ಲೂರು-ಪೊರಾಡ್ ಸೇತುವೆ ಬಳಿ ರಸ್ತೆಗೆ ಬರೆ ಕುಸಿತದಿಂದ ಲಘು ವಾಹನ ಹೊರತುಪಡಿಸಿ ದೊಡ್ಡ ವಾಹನ ಸಂಚಾರಕ್ಕೆ ತಡೆಯುಂಟಾಯಿತು. ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿಯೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 10,000 ಕ್ಯೂಸೆಕ್ಸ್ನಷ್ಟು ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಮಳೆ ಮತ್ತಷ್ಟು ಹೆಚ್ಚಾಗುವ ಹಾಗೂ ಒಳಹರಿವು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನದಿಪಾತ್ರದ ನಿವಾಸಿಗಳು ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ.
ಇನ್ನು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿತ್ತು. ಆದರೆ, ಬುಧವಾರ ಬೆಳಿಗ್ಗೆ 8 ಗಂಟೆ ವೇಳೆಗೆ ತಡವಾಗಿ ರಜೆ ಘೋಷಣೆಯಾದ ಬಗ್ಗೆ ಹಲವು ಪೋಷಕರು, ಸಾರ್ವಜನಿಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…