Kodagu: Heavy rains disrupt normal life
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆರಿದ್ರಾ ಮಳೆಯ ಅಬ್ಬರಕ್ಕೆ ಜನಜೀವನ ತತ್ತರಿಸಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕೊಡಗಿನ ಪಶ್ಚಿಮಘಟ್ಟ ವ್ಯಾಪ್ತಿಯ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ, ಹುದಿಕೇರಿ, ಬಿ.ಶೆಟ್ಟಿಗೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗಿದೆ. ರಸ್ತೆ ನಡುವೆ ನದಿಯಂತೆ ನೀರು ಹರಿದಿದೆ. ಬಿರುನಾಣಿ-ಹುದಿಕೇರಿ ರಸ್ತೆಯ ಹೈಸೊಡ್ಲೂರು-ಪೊರಾಡ್ ಸೇತುವೆ ಬಳಿ ರಸ್ತೆಗೆ ಬರೆ ಕುಸಿತದಿಂದ ಲಘು ವಾಹನ ಹೊರತುಪಡಿಸಿ ದೊಡ್ಡ ವಾಹನ ಸಂಚಾರಕ್ಕೆ ತಡೆಯುಂಟಾಯಿತು. ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿಯೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 10,000 ಕ್ಯೂಸೆಕ್ಸ್ನಷ್ಟು ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಮಳೆ ಮತ್ತಷ್ಟು ಹೆಚ್ಚಾಗುವ ಹಾಗೂ ಒಳಹರಿವು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನದಿಪಾತ್ರದ ನಿವಾಸಿಗಳು ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ.
ಇನ್ನು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿತ್ತು. ಆದರೆ, ಬುಧವಾರ ಬೆಳಿಗ್ಗೆ 8 ಗಂಟೆ ವೇಳೆಗೆ ತಡವಾಗಿ ರಜೆ ಘೋಷಣೆಯಾದ ಬಗ್ಗೆ ಹಲವು ಪೋಷಕರು, ಸಾರ್ವಜನಿಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…