ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಪ್ರೇಯರ್ ಮುಗಿಸಿ ಬಿಸಿಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ತೋಟವೊಂದರಿಂದ ಹಾರಿಬಂದ ಹೆಜ್ಜೇನು ಹಿಂಡು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ.
ಇದನ್ನು ಓದಿ: ಶವಸಂಸ್ಕಾರ ವೇಳೆ ಹೆಜ್ಜೇನು ದಾಳಿ : 40ಕ್ಕೂ ಹೆಚ್ಚು ಮಂದಿ ಗಾಯ
ಮಕ್ಕಳು ಹಾಗೂ ಶಾಲಾ ಶಿಕ್ಷಕರ ಮೇಲೆ ದಾಳಿಯಾಗಿದ್ದು, ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಜೇನು ಹುಳುಗಳನ್ನು ಓಡಿಸಿ ಮಕ್ಕಳನ್ನು ವಿರಾಜಪೇಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಾಹಿತಿ ಪ್ರಕಾರ ಮಕ್ಕಳಿಗೆ ಯಾವುದೇ ತೊಂದರೆಗಳಿಲ್ಲ ಎಂದು ವೈದ್ಯರು ಹೇಳಿದ್ದಾರೆ. ವಿಷಯ ತಿಳಿದು ವಿರಾಜಪೇಟೆ ನಗರ ಠಾಣೆಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…
ನವದೆಹಲಿ: ಅಮೇರಿಕಾ-ಇರಾನ್ ಯುದ್ಧದ ಹೊರತಾಗಿಯೂ ಏಪ್ರಿಲ್.2026ರಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್ನಲ್ಲಿ…
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…