ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಪ್ರೇಯರ್ ಮುಗಿಸಿ ಬಿಸಿಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ತೋಟವೊಂದರಿಂದ ಹಾರಿಬಂದ ಹೆಜ್ಜೇನು ಹಿಂಡು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ.
ಇದನ್ನು ಓದಿ: ಶವಸಂಸ್ಕಾರ ವೇಳೆ ಹೆಜ್ಜೇನು ದಾಳಿ : 40ಕ್ಕೂ ಹೆಚ್ಚು ಮಂದಿ ಗಾಯ
ಮಕ್ಕಳು ಹಾಗೂ ಶಾಲಾ ಶಿಕ್ಷಕರ ಮೇಲೆ ದಾಳಿಯಾಗಿದ್ದು, ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಜೇನು ಹುಳುಗಳನ್ನು ಓಡಿಸಿ ಮಕ್ಕಳನ್ನು ವಿರಾಜಪೇಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಾಹಿತಿ ಪ್ರಕಾರ ಮಕ್ಕಳಿಗೆ ಯಾವುದೇ ತೊಂದರೆಗಳಿಲ್ಲ ಎಂದು ವೈದ್ಯರು ಹೇಳಿದ್ದಾರೆ. ವಿಷಯ ತಿಳಿದು ವಿರಾಜಪೇಟೆ ನಗರ ಠಾಣೆಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…