ಕೊಡಗು

ಕೊಡಗು: ಸೈನಿಕ ಶಾಲೆಯಲ್ಲಿ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆ

ಕುಶಾಲನಗರ: ಸೈನಿಕ ಶಾಲೆ ಕೊಡಗಿನಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆಯು ಏಪ್ರಿಲ್ 9 ಮತ್ತು 10ರಂದು ಎರಡು ದಿನಗಳವರೆಗೆ ನಡೆಸಲಾಯಿತು.

ವಿದ್ಯಾರ್ಥಿಗಳಲ್ಲಿನ ಪ್ರತಿಭೆ, ಸೃಜನಶೀಲತೆ, ದೇಶಾಭಿಮಾನ , ವಿವಿಧ ಕಲೆ, ಸಂಸ್ಕೃತಿಯ ಅರಿವನ್ನು ಮಕ್ಕಳಲ್ಲಿ ಮೂಡಿಸುವ ಉದ್ದೇಶವನ್ನು ಈ ಸ್ಪರ್ಧೆ ಹೊಂದಿತ್ತು. ಪ್ರಸ್ತುತ ಸ್ಪರ್ಧೆಯಲ್ಲಿ ಶಾಲೆಯ ಮೆನನ್, ಕಾರ್ಯಪ್ಪ, ಕಠಾರಿ ಹಾಗೂ ಸುಬ್ರತೋ ನಿಲಯಗಳು ಭಾಗವಹಿಸಿದ್ದವು.

ಸ್ಪರ್ಧೆಯಲ್ಲಿ ಸಮೂಹ ಗೀತೆಗಳು, ಸಮೂಹ ನೃತ್ಯಗಳು, ಸಮೂಹ ಜಾನಪದ ನೃತ್ಯಗಳು ಮತ್ತು ಪರಮವೀರ ಚಕ್ರ ಪುರಸ್ಕೃತರ ಶೌರ್ಯದ ಕಥೆಗಳ ಆಧಾರಿತ ಕಿರು ನಾಟಕಗಳ ಮೂಲಕ ಆಕರ್ಷಕ ಪ್ರದರ್ಶನಗಳನ್ನು ನೀಡಿದರು. ಪ್ರತಿ ನಿಲಯವು ಶಕ್ತಿ, ಭಾವನೆ ಮತ್ತು ದೇಶಪ್ರೇಮ ತುಂಬಿದ ಕಲಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಪ್ರೇಕ್ಷಕರ ಹಾಗೂ ತೀರ್ಪುಗಾರರ ಭಾರೀ ಮೆಚ್ಚುಗೆ ಪಡೆದವು.

ಪ್ರಸ್ತುತ ಸ್ಪರ್ಧೆಯಲ್ಲಿ ಮೆನನ್ ನಿಲಯವು ಎಲ್ಲ ವಿಭಾಗಗಳಲ್ಲಿ ಅಮೋಘವಾದ ಪ್ರದರ್ಶನ ನೀಡಿ ಚಾಂಪಿಯನ್ ನಿಲಯವಾಗಿ ಹೊರಹೊಮ್ಮಿತು. ಇದರೊಂದಿಗೆ ಶಾಲೆಯ ಕೆಡೆಟ್ ಗಿತೇಶ್ ಅತ್ಯುತ್ತಮ ನಟ ಪ್ರಶಸ್ತಿಗೆ, ಕೆಡೆಟ್ ಎನ್‌ಆರ್‌ಇ ಮನು ಅತ್ಯುತ್ತಮ ನಟಿ ಪ್ರಶಸ್ತಿಗೆ ಹಾಗೂ ಕೆಡೆಟ್ ಸಂಪ್ರೀತ್ ಮತ್ತು ಕೆಡೆಟ್ ಸುಹಾನಿ ಅತ್ಯುತ್ತಮ ನಿರೂಪಕ ಪ್ರಶಸ್ತಿಗೆ ಭಾಜನರಾದರೆ, ಮೆನನ್ ನಿಲಯವು ಅತ್ಯತ್ತಮ ಸಂಪನ್ಮೂಲ ಬಳಕೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಮುಖ್ಯ ಅತಿಥಿ ಪ್ರಭಾರೆ ಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಪ್ರಕಾಶ್ ರಾವ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ, ಶಾಲೆಯಲ್ಲಿರುವ ಸಂಪತ್ತುಗಳನ್ನು ಸೃಜನಶೀಲವಾಗಿ ಉಪಯೋಗಿಸಿ ಇನ್ನಷ್ಟು ಸಾಧನೆ ಮಾಡುವಂತೆ ಎಲ್ಲಾ ಸ್ಪರ್ಧಿಗಳಿಗೆ ಕರೆ ನೀಡಿದರು.

ಇವರೊಂದಿಗೆ ಶಾಲೆಯ ಉಪ ಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ, ಶಾಲಾ ವೈದ್ಯಕೀಯ ಅಧಿಕಾರಿ ಡಾ. ಚಿನ್ಮಯಿ, ಹಿರಿಯ ಶಿಕ್ಷಕರಾದ ಶ್ರೀ ವಿಭಿನ್ ಕುಮಾರ್, ಶಾಲೆಯ ಶೈಕ್ಷಣಿಕ ಹಾಗೂ ಆಡಳಿತ ಸಿಬ್ಬಂದಿಯವರು ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

35 mins ago

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

46 mins ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

1 hour ago

ಅಧಿಕಾರ ಹಂಚಿಕೆ ಗೊಂದಲ; ಬಿಜೆಪಿ, ಜಾ.ದಳದಲ್ಲಿ ಆತ್ಮವಿಶ್ವಾಸ ಹೆಚ್ಚಳ

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…

1 hour ago

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

2 hours ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

2 hours ago