ಕೊಡಗು

ಕೊಡಗು: ಸೈನಿಕ ಶಾಲೆಯಲ್ಲಿ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆ

ಕುಶಾಲನಗರ: ಸೈನಿಕ ಶಾಲೆ ಕೊಡಗಿನಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆಯು ಏಪ್ರಿಲ್ 9 ಮತ್ತು 10ರಂದು ಎರಡು ದಿನಗಳವರೆಗೆ ನಡೆಸಲಾಯಿತು.

ವಿದ್ಯಾರ್ಥಿಗಳಲ್ಲಿನ ಪ್ರತಿಭೆ, ಸೃಜನಶೀಲತೆ, ದೇಶಾಭಿಮಾನ , ವಿವಿಧ ಕಲೆ, ಸಂಸ್ಕೃತಿಯ ಅರಿವನ್ನು ಮಕ್ಕಳಲ್ಲಿ ಮೂಡಿಸುವ ಉದ್ದೇಶವನ್ನು ಈ ಸ್ಪರ್ಧೆ ಹೊಂದಿತ್ತು. ಪ್ರಸ್ತುತ ಸ್ಪರ್ಧೆಯಲ್ಲಿ ಶಾಲೆಯ ಮೆನನ್, ಕಾರ್ಯಪ್ಪ, ಕಠಾರಿ ಹಾಗೂ ಸುಬ್ರತೋ ನಿಲಯಗಳು ಭಾಗವಹಿಸಿದ್ದವು.

ಸ್ಪರ್ಧೆಯಲ್ಲಿ ಸಮೂಹ ಗೀತೆಗಳು, ಸಮೂಹ ನೃತ್ಯಗಳು, ಸಮೂಹ ಜಾನಪದ ನೃತ್ಯಗಳು ಮತ್ತು ಪರಮವೀರ ಚಕ್ರ ಪುರಸ್ಕೃತರ ಶೌರ್ಯದ ಕಥೆಗಳ ಆಧಾರಿತ ಕಿರು ನಾಟಕಗಳ ಮೂಲಕ ಆಕರ್ಷಕ ಪ್ರದರ್ಶನಗಳನ್ನು ನೀಡಿದರು. ಪ್ರತಿ ನಿಲಯವು ಶಕ್ತಿ, ಭಾವನೆ ಮತ್ತು ದೇಶಪ್ರೇಮ ತುಂಬಿದ ಕಲಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಪ್ರೇಕ್ಷಕರ ಹಾಗೂ ತೀರ್ಪುಗಾರರ ಭಾರೀ ಮೆಚ್ಚುಗೆ ಪಡೆದವು.

ಪ್ರಸ್ತುತ ಸ್ಪರ್ಧೆಯಲ್ಲಿ ಮೆನನ್ ನಿಲಯವು ಎಲ್ಲ ವಿಭಾಗಗಳಲ್ಲಿ ಅಮೋಘವಾದ ಪ್ರದರ್ಶನ ನೀಡಿ ಚಾಂಪಿಯನ್ ನಿಲಯವಾಗಿ ಹೊರಹೊಮ್ಮಿತು. ಇದರೊಂದಿಗೆ ಶಾಲೆಯ ಕೆಡೆಟ್ ಗಿತೇಶ್ ಅತ್ಯುತ್ತಮ ನಟ ಪ್ರಶಸ್ತಿಗೆ, ಕೆಡೆಟ್ ಎನ್‌ಆರ್‌ಇ ಮನು ಅತ್ಯುತ್ತಮ ನಟಿ ಪ್ರಶಸ್ತಿಗೆ ಹಾಗೂ ಕೆಡೆಟ್ ಸಂಪ್ರೀತ್ ಮತ್ತು ಕೆಡೆಟ್ ಸುಹಾನಿ ಅತ್ಯುತ್ತಮ ನಿರೂಪಕ ಪ್ರಶಸ್ತಿಗೆ ಭಾಜನರಾದರೆ, ಮೆನನ್ ನಿಲಯವು ಅತ್ಯತ್ತಮ ಸಂಪನ್ಮೂಲ ಬಳಕೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಮುಖ್ಯ ಅತಿಥಿ ಪ್ರಭಾರೆ ಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಪ್ರಕಾಶ್ ರಾವ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ, ಶಾಲೆಯಲ್ಲಿರುವ ಸಂಪತ್ತುಗಳನ್ನು ಸೃಜನಶೀಲವಾಗಿ ಉಪಯೋಗಿಸಿ ಇನ್ನಷ್ಟು ಸಾಧನೆ ಮಾಡುವಂತೆ ಎಲ್ಲಾ ಸ್ಪರ್ಧಿಗಳಿಗೆ ಕರೆ ನೀಡಿದರು.

ಇವರೊಂದಿಗೆ ಶಾಲೆಯ ಉಪ ಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ, ಶಾಲಾ ವೈದ್ಯಕೀಯ ಅಧಿಕಾರಿ ಡಾ. ಚಿನ್ಮಯಿ, ಹಿರಿಯ ಶಿಕ್ಷಕರಾದ ಶ್ರೀ ವಿಭಿನ್ ಕುಮಾರ್, ಶಾಲೆಯ ಶೈಕ್ಷಣಿಕ ಹಾಗೂ ಆಡಳಿತ ಸಿಬ್ಬಂದಿಯವರು ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

1 hour ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

2 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

2 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

2 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

3 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

3 hours ago