ಕೊಡಗು

ಕೊಡಗು: ಸೈನಿಕ ಶಾಲೆಯಲ್ಲಿ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆ

ಕುಶಾಲನಗರ: ಸೈನಿಕ ಶಾಲೆ ಕೊಡಗಿನಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆಯು ಏಪ್ರಿಲ್ 9 ಮತ್ತು 10ರಂದು ಎರಡು ದಿನಗಳವರೆಗೆ ನಡೆಸಲಾಯಿತು.

ವಿದ್ಯಾರ್ಥಿಗಳಲ್ಲಿನ ಪ್ರತಿಭೆ, ಸೃಜನಶೀಲತೆ, ದೇಶಾಭಿಮಾನ , ವಿವಿಧ ಕಲೆ, ಸಂಸ್ಕೃತಿಯ ಅರಿವನ್ನು ಮಕ್ಕಳಲ್ಲಿ ಮೂಡಿಸುವ ಉದ್ದೇಶವನ್ನು ಈ ಸ್ಪರ್ಧೆ ಹೊಂದಿತ್ತು. ಪ್ರಸ್ತುತ ಸ್ಪರ್ಧೆಯಲ್ಲಿ ಶಾಲೆಯ ಮೆನನ್, ಕಾರ್ಯಪ್ಪ, ಕಠಾರಿ ಹಾಗೂ ಸುಬ್ರತೋ ನಿಲಯಗಳು ಭಾಗವಹಿಸಿದ್ದವು.

ಸ್ಪರ್ಧೆಯಲ್ಲಿ ಸಮೂಹ ಗೀತೆಗಳು, ಸಮೂಹ ನೃತ್ಯಗಳು, ಸಮೂಹ ಜಾನಪದ ನೃತ್ಯಗಳು ಮತ್ತು ಪರಮವೀರ ಚಕ್ರ ಪುರಸ್ಕೃತರ ಶೌರ್ಯದ ಕಥೆಗಳ ಆಧಾರಿತ ಕಿರು ನಾಟಕಗಳ ಮೂಲಕ ಆಕರ್ಷಕ ಪ್ರದರ್ಶನಗಳನ್ನು ನೀಡಿದರು. ಪ್ರತಿ ನಿಲಯವು ಶಕ್ತಿ, ಭಾವನೆ ಮತ್ತು ದೇಶಪ್ರೇಮ ತುಂಬಿದ ಕಲಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಪ್ರೇಕ್ಷಕರ ಹಾಗೂ ತೀರ್ಪುಗಾರರ ಭಾರೀ ಮೆಚ್ಚುಗೆ ಪಡೆದವು.

ಪ್ರಸ್ತುತ ಸ್ಪರ್ಧೆಯಲ್ಲಿ ಮೆನನ್ ನಿಲಯವು ಎಲ್ಲ ವಿಭಾಗಗಳಲ್ಲಿ ಅಮೋಘವಾದ ಪ್ರದರ್ಶನ ನೀಡಿ ಚಾಂಪಿಯನ್ ನಿಲಯವಾಗಿ ಹೊರಹೊಮ್ಮಿತು. ಇದರೊಂದಿಗೆ ಶಾಲೆಯ ಕೆಡೆಟ್ ಗಿತೇಶ್ ಅತ್ಯುತ್ತಮ ನಟ ಪ್ರಶಸ್ತಿಗೆ, ಕೆಡೆಟ್ ಎನ್‌ಆರ್‌ಇ ಮನು ಅತ್ಯುತ್ತಮ ನಟಿ ಪ್ರಶಸ್ತಿಗೆ ಹಾಗೂ ಕೆಡೆಟ್ ಸಂಪ್ರೀತ್ ಮತ್ತು ಕೆಡೆಟ್ ಸುಹಾನಿ ಅತ್ಯುತ್ತಮ ನಿರೂಪಕ ಪ್ರಶಸ್ತಿಗೆ ಭಾಜನರಾದರೆ, ಮೆನನ್ ನಿಲಯವು ಅತ್ಯತ್ತಮ ಸಂಪನ್ಮೂಲ ಬಳಕೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಮುಖ್ಯ ಅತಿಥಿ ಪ್ರಭಾರೆ ಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಪ್ರಕಾಶ್ ರಾವ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ, ಶಾಲೆಯಲ್ಲಿರುವ ಸಂಪತ್ತುಗಳನ್ನು ಸೃಜನಶೀಲವಾಗಿ ಉಪಯೋಗಿಸಿ ಇನ್ನಷ್ಟು ಸಾಧನೆ ಮಾಡುವಂತೆ ಎಲ್ಲಾ ಸ್ಪರ್ಧಿಗಳಿಗೆ ಕರೆ ನೀಡಿದರು.

ಇವರೊಂದಿಗೆ ಶಾಲೆಯ ಉಪ ಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ, ಶಾಲಾ ವೈದ್ಯಕೀಯ ಅಧಿಕಾರಿ ಡಾ. ಚಿನ್ಮಯಿ, ಹಿರಿಯ ಶಿಕ್ಷಕರಾದ ಶ್ರೀ ವಿಭಿನ್ ಕುಮಾರ್, ಶಾಲೆಯ ಶೈಕ್ಷಣಿಕ ಹಾಗೂ ಆಡಳಿತ ಸಿಬ್ಬಂದಿಯವರು ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

6 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

6 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

6 hours ago