ಕೊಡಗು

ಕೊಡಗು ಮುಳುಗುತ್ತಿದೆ ನಿಮ್ಮ ರಾಜಕಾರಣ ಬಿಡಿ: ಎ.ಎಸ್.ಪೊನ್ನಣ್ಣ

ಮಡಿಕೇರಿ: ತೀವ್ರ ಮಳೆಯಿಂದ ಕೊಡಗು ಜಿಲ್ಲೆ ಮುಳುಗಿತ್ತಿದೆ. ಈ ಸಂಕಷ್ಟದ ಸಮಯದಲ್ಲಿ ನಿಮ್ಮ ರಾಜಕಾರಣ ಬಿಟ್ಟು ಕೊಡಗಿನ ಜನರ ರಕ್ಷಣೆಗೆ ಪೂರಕವಾದ ಚರ್ಚೆಗೆ ಬನ್ನಿ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ವಿಧಾನ ಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಶುಕ್ರವಾರ(ಜು.19) ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಾಗ ಪ್ರತಿ ಪಕ್ಷಗಳು ಸಭಾಧ್ಯಕ್ಷರ ಪೀಠದ ಮುಂದೆ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎ.ಎಸ್.ಪೊನ್ನಣ್ಣ, ಪ್ರಸ್ತುತ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಜನ ಭಯಭೀತರಾಗಿದ್ದಾರೆ. ಊರು,ಕೇರಿ,ರಸ್ತೆ ಎಲ್ಲಾ ನೀರಿನಿಂದ ಮುಳುಗುತ್ತಿದೆ. ಇಂತಹ ಸಂಧರ್ಭದಲ್ಲಿ ಸರ್ಕಾರ ಜನರ ಜೀವ ಮತ್ತು ಆಸ್ತಿ ಪಾಸ್ತಿ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಬೇಕಿದೆ. ಕಳೆದ ನಾಲ್ಕು ದಿನದಿಂದ ವಿದ್ಯುತ್ ತಂತಿಗಳು ತುಂಡಾಗಿ ಕೊಡಗು ಕತ್ತಲೆಯ ಕೂಪವಾಗಿದೆ. ಜನರು ಮನೆಯಿಂದ ಹೊರಬಾರದ ಸ್ಥಿತಿ ನಿರ್ಮಾಣವಾಗಿದೆ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜಕಾರಣ ಬೇಡ. ಮೊದಲು ಸಮಸ್ಯೆ ಬಗೆಹರಿಸಲು ಒಂದಾಗಿ ಪ್ರಯತ್ನಿಸುವ ಕೆಲಸ ಆಗಲಿ ಎಂದು ಸರ್ಕಾರ , ಅಡಳಿತ ಹಾಗೂ ವಿಪಕ್ಷಗಳ ಸದಸ್ಯರಿಗೆ ಸದನದಲ್ಲಿ ಒತ್ತಾಯಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

1 hour ago

114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…

1 hour ago

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…

2 hours ago

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…

2 hours ago

ಹೊಸ ಶಾಸಕರನ್ನು ಮಂತ್ರಿ ಮಾಡಿದ್ರೆ ತಪ್ಪೇನು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

2 hours ago

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ವಿಚಾರ: ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…

2 hours ago