ಮಡಿಕೇರಿ: ತೀವ್ರ ಮಳೆಯಿಂದ ಕೊಡಗು ಜಿಲ್ಲೆ ಮುಳುಗಿತ್ತಿದೆ. ಈ ಸಂಕಷ್ಟದ ಸಮಯದಲ್ಲಿ ನಿಮ್ಮ ರಾಜಕಾರಣ ಬಿಟ್ಟು ಕೊಡಗಿನ ಜನರ ರಕ್ಷಣೆಗೆ ಪೂರಕವಾದ ಚರ್ಚೆಗೆ ಬನ್ನಿ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ವಿಧಾನ ಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಶುಕ್ರವಾರ(ಜು.19) ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಾಗ ಪ್ರತಿ ಪಕ್ಷಗಳು ಸಭಾಧ್ಯಕ್ಷರ ಪೀಠದ ಮುಂದೆ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎ.ಎಸ್.ಪೊನ್ನಣ್ಣ, ಪ್ರಸ್ತುತ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಜನ ಭಯಭೀತರಾಗಿದ್ದಾರೆ. ಊರು,ಕೇರಿ,ರಸ್ತೆ ಎಲ್ಲಾ ನೀರಿನಿಂದ ಮುಳುಗುತ್ತಿದೆ. ಇಂತಹ ಸಂಧರ್ಭದಲ್ಲಿ ಸರ್ಕಾರ ಜನರ ಜೀವ ಮತ್ತು ಆಸ್ತಿ ಪಾಸ್ತಿ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಬೇಕಿದೆ. ಕಳೆದ ನಾಲ್ಕು ದಿನದಿಂದ ವಿದ್ಯುತ್ ತಂತಿಗಳು ತುಂಡಾಗಿ ಕೊಡಗು ಕತ್ತಲೆಯ ಕೂಪವಾಗಿದೆ. ಜನರು ಮನೆಯಿಂದ ಹೊರಬಾರದ ಸ್ಥಿತಿ ನಿರ್ಮಾಣವಾಗಿದೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜಕಾರಣ ಬೇಡ. ಮೊದಲು ಸಮಸ್ಯೆ ಬಗೆಹರಿಸಲು ಒಂದಾಗಿ ಪ್ರಯತ್ನಿಸುವ ಕೆಲಸ ಆಗಲಿ ಎಂದು ಸರ್ಕಾರ , ಅಡಳಿತ ಹಾಗೂ ವಿಪಕ್ಷಗಳ ಸದಸ್ಯರಿಗೆ ಸದನದಲ್ಲಿ ಒತ್ತಾಯಿಸಿದರು.
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…
ರಾಮನಗರ: ಜಿಮ್ ಟ್ರೇನರ್ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…
ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…
ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…