ಮಡಿಕೇರಿ: ತೀವ್ರ ಮಳೆಯಿಂದ ಕೊಡಗು ಜಿಲ್ಲೆ ಮುಳುಗಿತ್ತಿದೆ. ಈ ಸಂಕಷ್ಟದ ಸಮಯದಲ್ಲಿ ನಿಮ್ಮ ರಾಜಕಾರಣ ಬಿಟ್ಟು ಕೊಡಗಿನ ಜನರ ರಕ್ಷಣೆಗೆ ಪೂರಕವಾದ ಚರ್ಚೆಗೆ ಬನ್ನಿ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ವಿಧಾನ ಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಶುಕ್ರವಾರ(ಜು.19) ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಾಗ ಪ್ರತಿ ಪಕ್ಷಗಳು ಸಭಾಧ್ಯಕ್ಷರ ಪೀಠದ ಮುಂದೆ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎ.ಎಸ್.ಪೊನ್ನಣ್ಣ, ಪ್ರಸ್ತುತ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಜನ ಭಯಭೀತರಾಗಿದ್ದಾರೆ. ಊರು,ಕೇರಿ,ರಸ್ತೆ ಎಲ್ಲಾ ನೀರಿನಿಂದ ಮುಳುಗುತ್ತಿದೆ. ಇಂತಹ ಸಂಧರ್ಭದಲ್ಲಿ ಸರ್ಕಾರ ಜನರ ಜೀವ ಮತ್ತು ಆಸ್ತಿ ಪಾಸ್ತಿ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಬೇಕಿದೆ. ಕಳೆದ ನಾಲ್ಕು ದಿನದಿಂದ ವಿದ್ಯುತ್ ತಂತಿಗಳು ತುಂಡಾಗಿ ಕೊಡಗು ಕತ್ತಲೆಯ ಕೂಪವಾಗಿದೆ. ಜನರು ಮನೆಯಿಂದ ಹೊರಬಾರದ ಸ್ಥಿತಿ ನಿರ್ಮಾಣವಾಗಿದೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜಕಾರಣ ಬೇಡ. ಮೊದಲು ಸಮಸ್ಯೆ ಬಗೆಹರಿಸಲು ಒಂದಾಗಿ ಪ್ರಯತ್ನಿಸುವ ಕೆಲಸ ಆಗಲಿ ಎಂದು ಸರ್ಕಾರ , ಅಡಳಿತ ಹಾಗೂ ವಿಪಕ್ಷಗಳ ಸದಸ್ಯರಿಗೆ ಸದನದಲ್ಲಿ ಒತ್ತಾಯಿಸಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…