ಕೊಡಗು

ಕೊಡಗು| ಮಳೆಹಾನಿ ಪ್ರದೇಶಕ್ಕೆ ಸಚಿವ ಬೋಸರಾಜು ಭೇಟಿ

ಕೊಡಗು: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮನೆಗಳು ಹಾನಿಯಾಗಿದ್ದು, ಮಳೆಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ ಸೇರಿದಂತೆ ಹಲವೆಡೆ ಮಳೆಗಳು ಹಾನಿಯಾಗಿರುವ ಪ್ರದೇಶಕ್ಕೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.

ಬಳಿಕ ಕಾವೇರಿ ನದಿ ಹರಿಯುವ ಕಣಿವೆ ತೂಗು ಸೇತುವೆ ಸ್ಥಳ ಹಾಗೂ ಕುಶಾಲನಗರ ತಾಲ್ಲೂಕಿನ ರಂಗಸಮುದ್ರ ಬಳಿ ಸೇತುವೆಯ ಪಕ್ಕದಲ್ಲಿ ಮಳೆಯಿಂದ ಕುಸಿತವಾದ ಸ್ಥಳವನ್ನು ವೀಕ್ಷಣೆ ಮಾಡಿ, ಆದಷ್ಟು ಬೇಗ ಇದನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಲೋಕೋಪಯೋಗಿ, ನೀರಾವರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

6 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

31 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

58 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago