ಕೊಡಗು

ಕೊಡಗು | ಮನೆಗಳಿಗೆ ತೆರಳಿ ಗಣತಿ ಪರಿಶೀಲಿಸಿದ ಸಚಿವ ಬೋಸರಾಜು

ಕೊಡಗು : ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣತಿಯನ್ನು ಸೌಲಭ್ಯ ವಂಚಿತ ಜನರಿಗೆ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿದೆಯೇ ಹೊರತು ಬೇರೆ ಯಾವುದೇ ಉದ್ದೇಶ ಹೊಂದಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಸಣ್ಣ ನೀರಾವರಿ ಹಾಗೂ ವಿಜ್ಞಾನ, ತಂತಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಜಿಲ್ಲೆಯಲ್ಲಿ ಜಾತಿ ಗಣತಿ ನಡೆಯುತ್ತಿದ್ದು, ಈ ವೇಳೆ ಗಣತಿ ನಡೆಯುತ್ತಿರುವ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ನೆರೆದಿದ್ದ ಜನರೊಂದಿಗೆ ಮಾತನಾಡಿದ ಸಚಿವರು, “ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿ ಅರ್ಥೈಸಿಕೊಳ್ಳಲು ಈ ಸಮೀಕ್ಷೆ ನಡೆಸಲಾಗುತ್ತಿದೆಯೇ ಹೊರತು ಬೇರೆ ಕಾರಣಗಳಿಗಾಗಿ ಅಲ್ಲ. ಆದರೆ, ಪ್ರತಿಪಕ್ಷಗಳು ಈ ಬಗ್ಗೆ ಸುಳ್ಳು ಮಾಹಿತಿ ಹಬ್ಬಿಸಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದು, ಸರ್ಕಾರದ ಒಳ್ಳೆಯ ಉದ್ದೇಶವನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು,” ಎಂದರು.

ಇದನ್ನು ಓದಿ : ಸಾಧ‌ಕರನ್ನು ಗುರುತಿಸಿ ಸನ್ಮಾನಿಸುವುದೇ ದೊಡ್ಡ ಸಾಧನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

“ಜನರ ಪರಿಸ್ಥಿತಿ ಸರ್ಕಾರಕ್ಕೆ ತಿಳಿದರೆ ಅವರ ಸಮಗ್ರ ಅಭಿವೃದ್ಧಿಗೆ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಸಹಾಯಕವಾಗುತ್ತದೆ. ಆದ್ದರಿಂದ ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅವರು ಹೇಳುವ ಮಾಹಿತಿ ನೀಡಿ ಎಲ್ಲಾ ಸಮುದಾಯದ ಅಭಿವೃದ್ಧಿಗೆ ಸಹಕರಿಸಬೇಕು,” ಎಂದು ಮನವಿ ಮಾಡಿದರು.

ಈ ವೇಳೆ ಸ್ಥಳೀಯ ಜನರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಸಚಿವರು ಮತ್ತು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದರು. ಈ ರೀತಿಯ ಗಣತಿ ಮೂಲಕ ತೊಂದರೆಗೊಳಗಾದ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೋರಿದರು. ಸರ್ಕಾರದಿಂದ ಎಲ್ಲಾ ವರ್ಗದ ಜನರ ಪ್ರಗತಿಗೆ ಸೂಕ್ತ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಪಕ್ಷದ ಮುಖಂಡರು, ಅಧಿಕಾರಿಗಳು ಈ ವೇಳೆ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

53 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

55 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

57 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

59 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

1 hour ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

1 hour ago