ಕೊಡಗು

ಕೊಡಗು | ಜಿಲ್ಲಾಸ್ಪತ್ರೆಗೆ ದೀಢೀರ್‌ ಭೇಟಿ ನೀಡಿದ ಶಾಸಕ ಮಂತರ್‌ಗೌಡ

ಮಡಿಕೇರಿ : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅನಾನುಕೂಲಗಳಾಗುತ್ತಿದೆ ಮತ್ತು ಸಿಬ್ಬಂದಿಗಳು ಸೌಜನ್ಯ ತೋರುತ್ತಿಲ್ಲ ಎನ್ನುವ ಗಂಭೀರ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಸಂಬಂಧಿಸಿದವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಹಾಗೂ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಬೇಕೆಂದು ವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಂತರ ರೋಗಿಗಳೊಂದಿಗೆ ಸಮಾಲೋಚನೆ ನಡೆಸಿ ಸೌಲಭ್ಯಗಳ ಕುರಿತು ಚರ್ಚಿಸಿದರು. ಆಸ್ಪತ್ರೆಯ ಲೋಪದೋಷಗಳನ್ನು ತಕ್ಷಣ ಸರಿಪಡಿಸಿ ಉತ್ತಮ ರೀತಿಯ ಜನಸ್ನೇಹಿ ವಾತಾವರಣವನ್ನು ಸೃಷ್ಟಿಸುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದುರಸ್ತಿಯಾದ ಬೆನ್ನಲ್ಲೇ ಗುಂಡಿಮಯವಾದ ಕರಡಿಗೋಡು ರಸ್ತೆ

ಕೃಷ್ಣ ಸಿದ್ದಾಪುರ ಕಳಪೆ ರಸ್ತೆ ಕಾಮಗಾರಿ; ೩೦ ಲಕ್ಷ ರೂ. ಅನುದಾನ ವ್ಯರ್ಥ ಸಿದ್ದಾಪುರ: ಇಲ್ಲಿನ ಕರಡಿಗೋಡು ಗ್ರಾಮದಲ್ಲಿ ರಸ್ತೆ…

3 mins ago

ಮೂಲಸೌಕರ್ಯ ವಂಚಿತ ಮುನಿಯಪ್ಪನ ದೊಡ್ಡಿ ಗ್ರಾಮ

ಮಹಾದೇಶ್ ಎಂ.ಗೌಡ ಕುಡಿಯುವ ನೀರು, ಚರಂಡಿ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ  ಹನೂರು: ಕುಡಿಯುವ ನೀರಿಗೆ ಹಾಹಾಕಾರ, ಶಾಲೆಗೆ…

9 mins ago

ಪುರಸಭೆಯಲ್ಲಿ ಖಾಯಂ ಅಧಿಕಾರಿಗಳಿಲ್ಲದೆ ಸಾರ್ವಜನಿಕರ ಪರದಾಟ

ಭೇರ್ಯ ಮಹೇಶ್ ಕೆ.ಆರ್.ನಗರ: ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ಜನರು ಅಲೆಯಬೇಕಾದ ಸ್ಥಿತಿ; ಅಭಿವೃದ್ಧಿ ಕುಂಠಿತ ಆರೋಪ  ಕೆ.ಆರ್.ನಗರ: ಪಟ್ಟಣದ ಪುರಸಭೆ…

13 mins ago

‘ಬಹುರೂಪಿ: ಅಂಬೇಡ್ಕರ್ ಆಶಯಗಳ ವಿಶ್ವಮೈತ್ರಿ ಪ್ರದರ್ಶನ’

ಸಂದರ್ಶನ: ಚಿರಂಜೀವಿ ಸಿ.ಹುಲ್ಲಹಳ್ಳಿ ‘ಆಂದೋಲನ’ ಸಂದರ್ಶನದಲ್ಲಿ ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ಅಭಿಮತ  ಮೈಸೂರು: ರಂಗಭೂಮಿಯ ಒಳಗೆ ಬಾಬಾ ಸಾಹೇಬ್…

17 mins ago

ತುಂಡು ಕೈಯಿಂದ ಕಡೆದ ಸೋಮನಾಥಪುರದ ಮೊಂಡಸಾಲೆ ನಾರಾಯಣನ ದೇಗುಲ

ಫೋಟೋ ಬರಹ, ಚಂದ್ರಶೇಖರ ಮೂರ್ತಿ ಸೋಮನಾಥಪುರದ ಬಳಿಯ ಮೊಂಡಸಾಲೆ ನಾರಾಯಣನ ದೇಗುಲ ಸರಿಯಾದ ಪೋಷಣೆ ಇಲ್ಲದೆ, ನಿರ್ಲಕ್ಷ್ಯಕ್ಕೆ ಒಳಗಾಗಿ ಗಿಡ…

25 mins ago

ಲಿಂಗಾಂಬುಧಿ ಕೆರೆಯ ಕುರಿತು ಏನೆಲ್ಲ ಬಲ್ಲಿರಿ?

ಫೋಟೋ ಬರಹ, ಸಿರಿ ಮೈಸೂರು ಪ್ರಶಾಂತವಾದ ಕೆರೆ ನೀರು, ಹಕ್ಕಿಗಳ ಚಿಲಿಪಿಲಿ, ಸುಂದರವಾದ ಸೂರ್ಯೋದಯ, ಅಲ್ಲಲ್ಲಿ ನವಿಲುಗಳು ಹಾಗೂ ಸಿಕ್ಕಾಪಟ್ಟೆ…

29 mins ago