RSS 100
ಮಡಿಕೇರಿ : ಕೇರಳ ರಾಜ್ಯದಲ್ಲಿ ನಡೆಯುವ ಓಣಂ ಹಬ್ಬವನ್ನು ಮಲಯಾಳಿ ಬಾಂಧವರು ತಮ್ಮತಮ್ಮ ಮನೆಯ ಮುಂಭಾಗದಲ್ಲಿ ಹೂಗಳಿಂದ ರಂಗೋಲಿ ಹಾಕಿ, ಕುಟುಂಬದ ಸದಸ್ಯರೊಂದಿಗೆ ಸಿಹಿ ಹಂಚಿ ಸಂಭ್ರಮದಿಂದ ಶುಕ್ರವಾರ ಆಚರಿಸಿದರು.
ಮಹಾಬಲಿ ಚಕ್ರವರ್ತಿ ತನ್ನ ಪ್ರಜೆಗಳನ್ನು ನೋಡಲು ಭೂಲೋಕಕ್ಕೆ ಆಗಮಿಸುವ ದಿನವನ್ನು ಮಲೆಯಾಳಿ ಬಾಂಧವರು ಹಬ್ಬವಾಗಿ ಆಚರಿಸುತ್ತಾರೆ. ಇನ್ನೂ ತಮ್ಮನ್ನು ನೋಡಲು ಆಗಮಿಸುವ ಮಹಾಬಲಿ ಚಕ್ರವರ್ತಿಯನ್ನು ಸ್ವಾಗತಿಸುವ ಸಲುವಾಗಿ ಹೂವಿನಿಂದ ರಂಗೋಲಿಯನ್ನು ಹಾಕಿ ಚಕ್ರವರ್ತಿಯನ್ನು ಸ್ವಾಗತಿಸುತ್ತಾರೆ. ಇದರ ಅಂಗವಾಗಿ ನಗರದ ವಿವಿಧೆಡೆ ಹಾಕಲಾಗಿದ್ದ ಪೂಕಳಂ ದೃಶ್ಯ ಗಮನ ಸೆಳೆಯಿತು. ಓಣಂ ಹಬ್ಬದ ಅಂಗವಾಗಿಯೇ ಮಲೆಯಾಳಿ ಬಾಂಧವರು ರುಚಿರುಚಿಯಾದ ಅಡುಗೆ ತಯಾರಿಸಿ ಸವಿದು, ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಆರ್ಎಸ್ಎಸ್ ಸೇವಕರಿಂದ ಆಚರಣೆ
ಓಣಂ ಹಬ್ಬದ ಪ್ರಯುಕ್ತ ಮಾದಾಪುರ ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷದ ಸ್ವಾಗತಕ್ಕಾಗಿ ಹೂವಿನ ರಂಗೋಲಿ ಹಾಕುವುದರೊಂದಿಗೆ ಗೌರವ ಸೂಚಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಜಿ ಕಾರ್ಯಕಾರಿಣಿ ಸದಸ್ಯರಾದ ಸುನಿಲ್ ಮಾದಾಪುರ, ಮನೋಜ ಕುಮಾರ್, ಹರೀಶ್, ದೀಪಕ್, ಧನುಷ್, ಪ್ರಸಾದ್, ಅಖಿಲೇಶ್, ನಿತೀಶ್, ಸುಜಿತ್, ಕಾರ್ಯಕರ್ತರು ಹಾಜರಿದ್ದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…