RSS 100
ಮಡಿಕೇರಿ : ಕೇರಳ ರಾಜ್ಯದಲ್ಲಿ ನಡೆಯುವ ಓಣಂ ಹಬ್ಬವನ್ನು ಮಲಯಾಳಿ ಬಾಂಧವರು ತಮ್ಮತಮ್ಮ ಮನೆಯ ಮುಂಭಾಗದಲ್ಲಿ ಹೂಗಳಿಂದ ರಂಗೋಲಿ ಹಾಕಿ, ಕುಟುಂಬದ ಸದಸ್ಯರೊಂದಿಗೆ ಸಿಹಿ ಹಂಚಿ ಸಂಭ್ರಮದಿಂದ ಶುಕ್ರವಾರ ಆಚರಿಸಿದರು.
ಮಹಾಬಲಿ ಚಕ್ರವರ್ತಿ ತನ್ನ ಪ್ರಜೆಗಳನ್ನು ನೋಡಲು ಭೂಲೋಕಕ್ಕೆ ಆಗಮಿಸುವ ದಿನವನ್ನು ಮಲೆಯಾಳಿ ಬಾಂಧವರು ಹಬ್ಬವಾಗಿ ಆಚರಿಸುತ್ತಾರೆ. ಇನ್ನೂ ತಮ್ಮನ್ನು ನೋಡಲು ಆಗಮಿಸುವ ಮಹಾಬಲಿ ಚಕ್ರವರ್ತಿಯನ್ನು ಸ್ವಾಗತಿಸುವ ಸಲುವಾಗಿ ಹೂವಿನಿಂದ ರಂಗೋಲಿಯನ್ನು ಹಾಕಿ ಚಕ್ರವರ್ತಿಯನ್ನು ಸ್ವಾಗತಿಸುತ್ತಾರೆ. ಇದರ ಅಂಗವಾಗಿ ನಗರದ ವಿವಿಧೆಡೆ ಹಾಕಲಾಗಿದ್ದ ಪೂಕಳಂ ದೃಶ್ಯ ಗಮನ ಸೆಳೆಯಿತು. ಓಣಂ ಹಬ್ಬದ ಅಂಗವಾಗಿಯೇ ಮಲೆಯಾಳಿ ಬಾಂಧವರು ರುಚಿರುಚಿಯಾದ ಅಡುಗೆ ತಯಾರಿಸಿ ಸವಿದು, ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಆರ್ಎಸ್ಎಸ್ ಸೇವಕರಿಂದ ಆಚರಣೆ
ಓಣಂ ಹಬ್ಬದ ಪ್ರಯುಕ್ತ ಮಾದಾಪುರ ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷದ ಸ್ವಾಗತಕ್ಕಾಗಿ ಹೂವಿನ ರಂಗೋಲಿ ಹಾಕುವುದರೊಂದಿಗೆ ಗೌರವ ಸೂಚಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಜಿ ಕಾರ್ಯಕಾರಿಣಿ ಸದಸ್ಯರಾದ ಸುನಿಲ್ ಮಾದಾಪುರ, ಮನೋಜ ಕುಮಾರ್, ಹರೀಶ್, ದೀಪಕ್, ಧನುಷ್, ಪ್ರಸಾದ್, ಅಖಿಲೇಶ್, ನಿತೀಶ್, ಸುಜಿತ್, ಕಾರ್ಯಕರ್ತರು ಹಾಜರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…