ಕೊಡಗು

ಕೊಡಗು : ಜಿಲ್ಲೆಯಾದ್ಯಂತ ಓಣಂ ಆಚರಣೆ

ಮಡಿಕೇರಿ : ಕೇರಳ ರಾಜ್ಯದಲ್ಲಿ ನಡೆಯುವ ಓಣಂ ಹಬ್ಬವನ್ನು ಮಲಯಾಳಿ ಬಾಂಧವರು ತಮ್ಮತಮ್ಮ ಮನೆಯ ಮುಂಭಾಗದಲ್ಲಿ ಹೂಗಳಿಂದ ರಂಗೋಲಿ ಹಾಕಿ, ಕುಟುಂಬದ ಸದಸ್ಯರೊಂದಿಗೆ ಸಿಹಿ ಹಂಚಿ ಸಂಭ್ರಮದಿಂದ ಶುಕ್ರವಾರ ಆಚರಿಸಿದರು.

ಮಹಾಬಲಿ ಚಕ್ರವರ್ತಿ ತನ್ನ ಪ್ರಜೆಗಳನ್ನು ನೋಡಲು ಭೂಲೋಕಕ್ಕೆ ಆಗಮಿಸುವ ದಿನವನ್ನು ಮಲೆಯಾಳಿ ಬಾಂಧವರು ಹಬ್ಬವಾಗಿ ಆಚರಿಸುತ್ತಾರೆ. ಇನ್ನೂ ತಮ್ಮನ್ನು ನೋಡಲು ಆಗಮಿಸುವ ಮಹಾಬಲಿ ಚಕ್ರವರ್ತಿಯನ್ನು ಸ್ವಾಗತಿಸುವ ಸಲುವಾಗಿ ಹೂವಿನಿಂದ ರಂಗೋಲಿಯನ್ನು ಹಾಕಿ ಚಕ್ರವರ್ತಿಯನ್ನು ಸ್ವಾಗತಿಸುತ್ತಾರೆ. ಇದರ ಅಂಗವಾಗಿ ನಗರದ ವಿವಿಧೆಡೆ ಹಾಕಲಾಗಿದ್ದ ಪೂಕಳಂ ದೃಶ್ಯ ಗಮನ ಸೆಳೆಯಿತು. ಓಣಂ ಹಬ್ಬದ ಅಂಗವಾಗಿಯೇ ಮಲೆಯಾಳಿ ಬಾಂಧವರು ರುಚಿರುಚಿಯಾದ ಅಡುಗೆ ತಯಾರಿಸಿ ಸವಿದು, ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಆರ್‌ಎಸ್‌ಎಸ್ ಸೇವಕರಿಂದ ಆಚರಣೆ
ಓಣಂ ಹಬ್ಬದ ಪ್ರಯುಕ್ತ ಮಾದಾಪುರ ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷದ ಸ್ವಾಗತಕ್ಕಾಗಿ ಹೂವಿನ ರಂಗೋಲಿ ಹಾಕುವುದರೊಂದಿಗೆ ಗೌರವ ಸೂಚಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಜಿ ಕಾರ್ಯಕಾರಿಣಿ ಸದಸ್ಯರಾದ ಸುನಿಲ್ ಮಾದಾಪುರ, ಮನೋಜ ಕುಮಾರ್, ಹರೀಶ್, ದೀಪಕ್, ಧನುಷ್, ಪ್ರಸಾದ್, ಅಖಿಲೇಶ್, ನಿತೀಶ್, ಸುಜಿತ್, ಕಾರ್ಯಕರ್ತರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago