ಮಡಿಕೇರಿ : ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್ಬೈಲ್ ನಲ್ಲಿ ನಡೆದಿದೆ.
ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ(37) ಮೃತ ಪೊಲೀಸ್ ಸಿಬ್ಬಂದಿ ಎಂದು ತಿಳಿದು ಬಂದಿದೆ.
ತಮ್ಮ ತೋಟದಲ್ಲಿ ಮಾವಿನ ಮರ ಏರಿ ಅದರ ಕೊಂಬೆಗೆ ಕಸಿ ಮಾಡುವ ಸಂದರ್ಭ ರಕ್ತದೊತ್ತಡ ಕಡಿಮೆಯಾಗಿ 50 ಅಡಿ ಎತ್ತರದಿಂದ ನೆಲಕ್ಕೆ ಬಿದ್ದದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರು ಆ ವೇಳೆಗೆ ಅವರು ಮೃತಪಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೃತ ಲೋಕೇಶ್ ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಯಾಗಿದ್ದ ಲೋಕೇಶ್ ಕಳೆದ 15 ವರ್ಷಗಳ ಕಾಲ ಅಪ್ಪಚ್ಚು ರಂಜನ್ ಅವರ ಗನ್ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಈ ಘಟನೆ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಲೋಕೇಶ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಆಗಮಿಸಿದ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಕಂಬನಿ ಮಿಡಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…