Mysore
28
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.

ಮಾಚಿಮಂಡ ಅಪ್ಪಚ್ಚು ಎಂಬಾತ ತನ್ನ ಅಣ್ಣನ ಮಗ ಬ್ರಿಜೇಶ್‌ ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ. ಆಸ್ತಿ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಗುಂಡಿನ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿರುವ ಬ್ರಿಜೇಶ್‌ಗೆ ವಿರಾಜಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಇಂದು ಬೆಳಗ್ಗೆ ಏಳು ಗಂಟೆಯ ಸಮಯದಲ್ಲಿ ಕಾಫಿ ಕೊಯ್ಯಲು ಬಂದಾಗ ಈ ಘಟನೆ ನಡೆದಿದ್ದು, ಮಾಹಿತಿ ಪ್ರಕಾರ ಅಪ್ಪಚ್ಚು ಪುತ್ರ ಅಮೃತ್‌ ಎಂಬಾತ ಕೂಡ ಬಿಜ್ರೇಶ್ ತಂದೆ ಮಾಚಿಮಂಡ ರತನ್‌ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:
error: Content is protected !!