ಕೊಡಗು

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.

ಮಾಚಿಮಂಡ ಅಪ್ಪಚ್ಚು ಎಂಬಾತ ತನ್ನ ಅಣ್ಣನ ಮಗ ಬ್ರಿಜೇಶ್‌ ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ. ಆಸ್ತಿ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಗುಂಡಿನ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿರುವ ಬ್ರಿಜೇಶ್‌ಗೆ ವಿರಾಜಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಇಂದು ಬೆಳಗ್ಗೆ ಏಳು ಗಂಟೆಯ ಸಮಯದಲ್ಲಿ ಕಾಫಿ ಕೊಯ್ಯಲು ಬಂದಾಗ ಈ ಘಟನೆ ನಡೆದಿದ್ದು, ಮಾಹಿತಿ ಪ್ರಕಾರ ಅಪ್ಪಚ್ಚು ಪುತ್ರ ಅಮೃತ್‌ ಎಂಬಾತ ಕೂಡ ಬಿಜ್ರೇಶ್ ತಂದೆ ಮಾಚಿಮಂಡ ರತನ್‌ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 mins ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

11 mins ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

8 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

8 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

8 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

8 hours ago