ಕೊಡಗು

ಕೊಡಗು| ಡಿಸೆಂಬರ್.‌4ರಂದು ಕೊಡಗಿನಲ್ಲಿ ಪುತ್ತರಿ ಹಬ್ಬ

ನಾಪೋಕ್ಲು: ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿಸೆಂಬರ್.‌4ಕ್ಕೆ ನಿಗದಿಯಾಗಿದೆ.

ಮಳೆ ದೇವರು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ ಕಾರ್ಯ ಇಂದು ನೆರವೇರಿತು.

ಸಾರ್ವತ್ರಿಕವಾಗಿ ಡಿಸೆಂಬರ್.‌4ರಂದು ರೋಹಿಣಿ ನಕ್ಷತ್ರದಲ್ಲಿ ಹಬ್ಬದ ಆಚರಣೆ ನಡೆಯಲಿದೆ. ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು. ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು. ಭೋಜನಕ್ಕೆ 10.10 ಗಂಟೆಗೆ ಮುಹೂರ್ತ ನಿಗದಿಯಾಗಿದೆ.

ಸಾರ್ವತ್ರಿಕವಾಗಿ ರಾತ್ರಿ 8.40 ಗಂಟೆಗೆ ನೆರೆ ಕಟ್ಟುವುದು. ರಾತ್ರಿ 9.40 ಗಂಟೆಗೆ ಕದಿರು ತೆಗೆಯುವುದು. 10.40 ಗಂಟೆಗೆ ಭೋಜನ ಮುಹೂರ್ತ ನಿಗದಿಯಾಗಿದೆ.

ಈ ಧಾರ್ಮಿಕ ಕಾರ್ಯದಲ್ಲಿ ದೇವತಕ್ಕ ಪರದಂಡ ಕುಟುಂಬಸ್ಥರು, ಅಮ್ಮಂಗೇರಿ ಕಣಿಯರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಯುದ್ಧ ಎಲ್ಲಿ ನಡೆದರೂ ಸಂಕಷ್ಟ ಬರುವುದು ಅಡುಗೆ ಮನೆಯೊಳಗೆ

ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್‌: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…

16 mins ago

ಸಫಾರಿ ವೇಳೆ ಮೊಬೈಲ್ ನಿಷೇಧ: ವನ್ಯಜೀವಿ ಛಾಯಾಗ್ರಾಹಕರಿಂದ ಸ್ವಾಗತ: ಕೆಲ ಸಫಾರಿ ಪ್ರಿಯರಿಗೆ ಬೇಸರ

ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…

26 mins ago

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

53 mins ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

1 hour ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

1 hour ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

2 hours ago