ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ನಿರಂತರ ಮಳೆಯಾಗಿದೆ.
ಕಳೆದ 2 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕಾವೇರಿ ನದಿಯಲ್ಲಿಯೂ ನೀರಿನ ಮಟ್ಟ ಹೆಚ್ಚಳವಾಗಿದೆ. ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ 10,000 ದಷ್ಟು ಕ್ಯೂಸೆಕ್ಸ್ನಷ್ಟು ನೀರನ್ನು ನದಿಗೆ ಹರಿಯಬಿಡಲಾಗುತ್ತಿದ್ದು, ನದಿ ಪಾತ್ರದ ನಿವಾಸಿಗಳು ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ.
ಧಾರಾಕಾರ ಮಳೆಯಿಂದಾಗಿ ಬಾಡಗ ಬಾಣಂಗಾಲ ಗ್ರಾಮದ ಅಮೀನ ಕೆ.ಪಿ.(ಕುಂಞಿಮಹಮ್ಮದ್) ರವರ ವಾಸದ ಮನೆಯ ಮುಂಭಾಗದ ಗೋಡೆ ಮತ್ತು ಮೇಲ್ಚಾವಣಿಗೆ ತೀವ್ರ ಹಾನಿಯಾಗಿದೆ. ಪೊನ್ನಂಪೇಟೆ ಹೋಬಳಿ ಹುದೂರು ಗ್ರಾಮದ ನಿವಾಸಿಯಾದ ಹೆಚ್.ಕೆ. ರವಿ ಎಂಬವರ ವಾಸದ ಮನೆಯ ಗೋಡೆ ಕುಸಿದು ತೀವ್ರ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಗಾಳಿ ಮಳೆಗೆ ಗ್ರಾಮೀಣ ಭಾಗದಲ್ಲಿ ಮರಗಳು ಧರೆಗುರುಳಿವೆ. ಕೆಲೆವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ದುರಸ್ತಿ ಕಾರ್ಯ ಚುರುಕುಗೊಂಡಿದೆ. ಮಂಗಳವಾರ ಜಿಲ್ಲೆಯಲ್ಲಿ ಆರೆಂಜ್ ಅಲಟ್ ಘೋಷಿಸಲಾಗಿದ್ದು, ನಂತರ ಮಳೆ ಕಡಿಮೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಸೋಮವಾರ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…