ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ ಆಗಿದ್ದಾರೆ.
ಆ ಮೂಲಕ ನಾಲ್ಕು ದಿನಗಳ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳು ಬಿದ್ದ ಬಂಗಲೆಯೊಂದರಲ್ಲೇ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ ಇದೀಗ ಯುವತಿ ಪತ್ತೆ ಆಗಿದ್ದಾರೆ.
ಕಾಡಿನಲ್ಲಿ ದಾರಿ ತಪ್ಪಿದ ಪರಿಣಾಮ ಹಾಗೂ ಮೊಬೈಲ್ ಬ್ಯಾಟರಿ ಚಾರ್ಜ್ ಇಲ್ಲದರಿಂದ, ಮೊಬೈಲ್ ಕಟ್ಟಾಗಿ ಸಂಪರ್ಕಕ್ಕೆ ಸಾಧ್ಯವಾಗಿಲ್ಲ ಈಕೆಯನ್ನು ಕಳೆದ ನಾಲ್ಕು ದಿನಗಳಿಂದ ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿ, ಎ ಎನ್ ಎಫ್ ತಂಡ, ಸ್ಥಳೀಯರು ತೀವ್ರ ಶೋಧ ನಡೆಸಿದ ಪರಿಣಾಮ ಇದೀಗ ಆಕೆ ಕಾಡಿನೊಳಗೆ ಪತ್ತೆಯಾಗಿದ್ದು ಆಕೆಯನ್ನು ಪೊಲೀಸರು ಕಾಡಿನಿಂದ ಕರೆದುಕೊಂಡು ಬರುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.





