ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ ಆಗಿದ್ದಾರೆ.
ಆ ಮೂಲಕ ನಾಲ್ಕು ದಿನಗಳ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳು ಬಿದ್ದ ಬಂಗಲೆಯೊಂದರಲ್ಲೇ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ ಇದೀಗ ಯುವತಿ ಪತ್ತೆ ಆಗಿದ್ದಾರೆ.
ಕಾಡಿನಲ್ಲಿ ದಾರಿ ತಪ್ಪಿದ ಪರಿಣಾಮ ಹಾಗೂ ಮೊಬೈಲ್ ಬ್ಯಾಟರಿ ಚಾರ್ಜ್ ಇಲ್ಲದರಿಂದ, ಮೊಬೈಲ್ ಕಟ್ಟಾಗಿ ಸಂಪರ್ಕಕ್ಕೆ ಸಾಧ್ಯವಾಗಿಲ್ಲ ಈಕೆಯನ್ನು ಕಳೆದ ನಾಲ್ಕು ದಿನಗಳಿಂದ ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿ, ಎ ಎನ್ ಎಫ್ ತಂಡ, ಸ್ಥಳೀಯರು ತೀವ್ರ ಶೋಧ ನಡೆಸಿದ ಪರಿಣಾಮ ಇದೀಗ ಆಕೆ ಕಾಡಿನೊಳಗೆ ಪತ್ತೆಯಾಗಿದ್ದು ಆಕೆಯನ್ನು ಪೊಲೀಸರು ಕಾಡಿನಿಂದ ಕರೆದುಕೊಂಡು ಬರುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…