ಕೊಡಗು: ನೆರೆಯ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಕೊಡಗಿನ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ.
ಕೊಡಗಿನಲ್ಲಿ ಈ ಬಾರಿ ಸುರಿದ ಧಾರಾಕಾರ ಮಳೆಯ ಜೊತೆ ಜೊತೆಗೆ ಪಕ್ಕದಲ್ಲೇ ಇರುವ ಕೇರಳದಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಇದರಿಂದ ಕೊಡಗಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಕಡಿಮೆ ಸಂಖ್ಯೆಯಲ್ಲಿ ಬರುತ್ತಿದ್ದು, ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ.
ಕಳೆದ ಬಾರಿ ಕೊಡಗಿಗೆ ಪ್ರವಾಸಿಗರು ಭೇಟಿ ನೀಡಿದ ಸಂಖ್ಯೆಗೆ ಹೋಲಿಸಿದರೆ ಈ ಬಾರಿ ಅದರ ಅರ್ಧದಷ್ಟು ಇಲ್ಲ ಎಂದು ಅಂದಾಜಿಸಲಾಗಿದೆ. ಹೀಗಾಗಿ ಕೊಡಗಿನ ವ್ಯಾಪಾರ-ವಹಿವಾಟಿನ ಮೇಲೂ ಹೊಡೆತ ಬಿದ್ದಿದೆ.
ದೇಶದ ವಿವಿಧ ಭಾಗಗಳಿಂದ ಹಿಡಿದು ವಿದೇಶಗಳಿಂದಲೂ ಅಪಾರ ಪ್ರವಾಸಿಗರು ಕೊಡಗಿನ ಸೌಂದರ್ಯ ಸವಿಯಲು ಬರುತ್ತಿದ್ದರು. ಆದರೆ ಈ ಬಾರಿ ಕೊಡಗಿನಲ್ಲಿ ಧಾರಾಕಾರ ಮಳೆಯಾಗಿದ್ದು, ಅಲ್ಲಲ್ಲಿ ಭೂಕುಸಿತ ಉಂಟಾಗಿತ್ತು. ಇದರ ಜೊತೆಗೆ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರವಾಸಿಗರು ಭಯಭೀತರಾಗಿದ್ದಾರೆ.
ಕೊಡಗಿನಲ್ಲಿರುವ ಪ್ರವಾಸಿ ತಾಣಗಳು ಬಹುತೇಕ ಬೆಟ್ಟಗುಡ್ಡಗಳಲ್ಲೇ ಇವೆ. ಹಾಗಾಗಿ ಪ್ರವಾಸಿಗರ ಸಂಖ್ಯೆಯಲ್ಲಿ ಈ ಬಾರಿ ಇಳಿಮುಖವಾಗಿದ್ದು, ವ್ಯಾಪಾರ-ವಹಿವಾಟು ಕೂಡ ಹೆಚ್ಚಾಗಿ ನಡೆಯುತ್ತಿಲ್ಲ ಎಂದು ಸ್ಥಳೀಯರೇ ಮಾಹಿತಿ ನೀಡಿದ್ದಾರೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…