ಕೊಡಗು: ಭಾರೀ ಮಳೆಯಿಂದಾಗಿ ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಸಂಪೂರ್ಣ ಸ್ತಬ್ಧವಾಗಿದ್ದ ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ.
ಕಳೆದ ಒಂದು ತಿಂಗಳಿನಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತ ಹಾಗೂ ಮರಗಳು ಧರೆಗುರುಳುತ್ತಿದ್ದವು.
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯಾದ್ಯಂತ ಇರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.
ಕಳೆದ 15 ದಿನಗಳಿಂದಲೂ ಪ್ರವಾಸಿಗರು ಕೊಡಗಿನತ್ತ ಮುಖ ಮಾಡದೇ ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಹೋಗುತ್ತಿದ್ದರು.
ಆದರೆ ಈಗ ಕೊಡಗಿನಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದ್ದು, ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರವಾಸಿಗರು ಕೊಡಗಿನತ್ತ ಮುಖ ಮಾಡಿದ್ದು, ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ.
ಪ್ರವಾಸಿಗರು ಕೊಡಗಿನತ್ತ ಮುಖ ಮಾಡಿರುವ ಹಿನ್ನೆಲೆಯಲ್ಲಿ ಸಣ್ಣ ವ್ಯಾಪಾರಿಗಳಿಗೂ ಭಾರೀ ಸಂತಸವಾಗಿದ್ದು, ಇದರ ಜೊತೆಗೆ ಟ್ಯಾಕ್ಸಿ, ಆಟೋ ಚಾಲಕರಿಗೆ ಭಾರೀ ಅನುಕೂಲವಾಗಿದೆ.
ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಈ ವಾರ ಕೊಡಗಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ರೆಸಾರ್ಟ್ಗಳಲ್ಲಿ ಮುಂಗಡ ಬುಕ್ಕಿಂಗ್ ಕೂಡ ಜಾಸ್ತಿಯಾಗಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…