ಕೊಡಗು: ಭಾರೀ ಮಳೆಯಿಂದಾಗಿ ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಸಂಪೂರ್ಣ ಸ್ತಬ್ಧವಾಗಿದ್ದ ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ.
ಕಳೆದ ಒಂದು ತಿಂಗಳಿನಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತ ಹಾಗೂ ಮರಗಳು ಧರೆಗುರುಳುತ್ತಿದ್ದವು.
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯಾದ್ಯಂತ ಇರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.
ಕಳೆದ 15 ದಿನಗಳಿಂದಲೂ ಪ್ರವಾಸಿಗರು ಕೊಡಗಿನತ್ತ ಮುಖ ಮಾಡದೇ ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಹೋಗುತ್ತಿದ್ದರು.
ಆದರೆ ಈಗ ಕೊಡಗಿನಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದ್ದು, ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರವಾಸಿಗರು ಕೊಡಗಿನತ್ತ ಮುಖ ಮಾಡಿದ್ದು, ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ.
ಪ್ರವಾಸಿಗರು ಕೊಡಗಿನತ್ತ ಮುಖ ಮಾಡಿರುವ ಹಿನ್ನೆಲೆಯಲ್ಲಿ ಸಣ್ಣ ವ್ಯಾಪಾರಿಗಳಿಗೂ ಭಾರೀ ಸಂತಸವಾಗಿದ್ದು, ಇದರ ಜೊತೆಗೆ ಟ್ಯಾಕ್ಸಿ, ಆಟೋ ಚಾಲಕರಿಗೆ ಭಾರೀ ಅನುಕೂಲವಾಗಿದೆ.
ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಈ ವಾರ ಕೊಡಗಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ರೆಸಾರ್ಟ್ಗಳಲ್ಲಿ ಮುಂಗಡ ಬುಕ್ಕಿಂಗ್ ಕೂಡ ಜಾಸ್ತಿಯಾಗಿದೆ.
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…