ಕೊಡಗು

ಕೊಡಗು ವಿವಿ ಮುಚ್ಚಲು ವಿರೋಧ: ಮಡಿಕೇರಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಡಿಕೇರಿ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪನೆಗೊಂಡಿದ್ದ ನೂತನ 10 ವಿಶ್ವವಿದ್ಯಾನಿಲಯಗಳ ಪೈಕಿ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದ್ದು, ಮುಚ್ಚುವ ಭೀತಿಯಲ್ಲಿ ಕೊಡಗು ವಿಶ್ವವಿದ್ಯಾಲಯವು ಕೂಡ ಸೇರಿರುವುದರಿಂದ ರಾಜ್ಯ ಸರಕಾರದ ನಿರ್ಧಾರಕ್ಕೆ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಹಾಗೂ ಮಡಿಕೇರಿ ಸರ್ಕಾರಿ ಪದವಿ ಕಾಲೇಜು, ಎಂ ಮಹಿಳಾ ಕಾಲೇಜು ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾವಣೆಗೊಂಡು ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಸಂಘಟನೆಯ ಪ್ರಮುಖರು, ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾನಿಲಯಗಳ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ವಿಶ್ವವಿದ್ಯಾನಿಲಯಗಳನ್ನು ಬಲಿಷ್ಠಗೊಳಿಸುವ ಕಾಳಜಿ ವಹಿಸದೇ ಮತ್ತು ಇಚ್ಛಾಶಕ್ತಿಯನ್ನು ತೋರದೇ ಕೊಡಗು ಮತ್ತು ಇತರೆ ಹಿಂದುಳಿದ ಜಿಲ್ಲೆಗಳಲ್ಲಿರುವ ಹೊಸ ಸರ್ಕಾರಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಹೊರಟಿರುವ ನಡೆಯನ್ನು ಖಂಡಿಸುವುದಾಗಿ ಹೇಳಿದರು.

ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಕಛೇರಿಗೆ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

40 mins ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

1 hour ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

3 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

3 hours ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

4 hours ago