ಮಡಿಕೇರಿ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪನೆಗೊಂಡಿದ್ದ ನೂತನ 10 ವಿಶ್ವವಿದ್ಯಾನಿಲಯಗಳ ಪೈಕಿ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದ್ದು, ಮುಚ್ಚುವ ಭೀತಿಯಲ್ಲಿ ಕೊಡಗು ವಿಶ್ವವಿದ್ಯಾಲಯವು ಕೂಡ ಸೇರಿರುವುದರಿಂದ ರಾಜ್ಯ ಸರಕಾರದ ನಿರ್ಧಾರಕ್ಕೆ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಹಾಗೂ ಮಡಿಕೇರಿ ಸರ್ಕಾರಿ ಪದವಿ ಕಾಲೇಜು, ಎಂ ಮಹಿಳಾ ಕಾಲೇಜು ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾವಣೆಗೊಂಡು ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಸಂಘಟನೆಯ ಪ್ರಮುಖರು, ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾನಿಲಯಗಳ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ವಿಶ್ವವಿದ್ಯಾನಿಲಯಗಳನ್ನು ಬಲಿಷ್ಠಗೊಳಿಸುವ ಕಾಳಜಿ ವಹಿಸದೇ ಮತ್ತು ಇಚ್ಛಾಶಕ್ತಿಯನ್ನು ತೋರದೇ ಕೊಡಗು ಮತ್ತು ಇತರೆ ಹಿಂದುಳಿದ ಜಿಲ್ಲೆಗಳಲ್ಲಿರುವ ಹೊಸ ಸರ್ಕಾರಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಹೊರಟಿರುವ ನಡೆಯನ್ನು ಖಂಡಿಸುವುದಾಗಿ ಹೇಳಿದರು.
ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಕಛೇರಿಗೆ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…