ಕೊಡಗು

ಕೊಡಗು ವಿವಿ ಉಳಿಸಲು ಕಾನೂನು ಹೋರಾಟಕ್ಕೂ ಸಿದ್ಧ

ಮಡಿಕೇರಿ: ಜನರಿಗೆ ಹತ್ತಿರದ ಶಿಕ್ಷಣ ಸಿಗಬೇಕು ಎಂಬ ಮಹತ್ವದ ಉದ್ದೇಶದಿಂದಲೇ ಕೊಡಗು ವಿವಿ ಆರಂಭಿಸಿರೋದು. ಹಾಗಾಗಿ ಹಣಕಾಸು ಅಥವಾ ಅನುದಾನದ ಕಾರಣದಿಂದ ಕೊಡಗು ವಿವಿ ಮುಚ್ಚಲು ಸರ್ಕಾರ ಮುಂದಾದರೆ ಕಾನೂನು ಹೋರಾಟ ನಡೆಸುವುದಾಗಿ ರಾಜ್ಯ ಉಚ್ಛನ್ಯಾಯಾಲಯದ ವಕೀಲರೂ ಆದ ಕಾಂಗ್ರೆಸ್ ಮುಖಂಡ ಹೆಚ್.ಎಸ್.ಚಂದ್ರಮೌಳಿ ಹೇಳಿದ್ದಾರೆ.

ರಾಜ್ಯದ ಬೇರೆ ವಿವಿಗಳಿಗೆ ಇರುವ ಪರಿಸ್ಥಿತಿ ಕೊಡಗು ವಿವಿಗೆ ಇಲ್ಲ. ಕೊಡಗು ವಿವಿ ಉಳಿಸಲು ರಾಜಕೀಯ ರಹಿತವಾದ ಹೋರಾಟದ ಅನಿವಾರ್ಯತೆ ಇದೆ. ನಮ್ಮ ಜಿಲ್ಲೆಯ ಬಡ ವಿದ್ಯಾರ್ಥಿಗಳು ವಿವಿ ಇಲ್ಲ ಎಂಬ ಕಾರಣಕ್ಕೆ ಹೊರ ಜಿಲ್ಲೆಗಳಿಗೆ ಹೋಗಿ ಉನ್ನತ ಶಿಕ್ಷಣ ಪಡೆಯದಂತಹ ಕೆಟ್ಟ ವಾತಾವರಣ ನಿರ್ಮಾಣ ವಾಗಕೂಡದು. ಲಾಭದಲ್ಲಿಯೇ ನಡೆಸಲು ಇದೇನು ಉದ್ಯಮವಲ್ಲ. ಹಾಗಾಗಿ ಲಾಭ ನಷ್ಟದ ಪ್ರಶ್ನೆ ಅಸಮಂಜಸ ಎಂದು ತಿಳಿಸಿದ್ದಾರೆ.

ಈಗ ಇರುವ ಕೊಡಗು ವಿವಿಗೆ ಸರ್ಕಾರ ಕನಿಷ್ಟ 10 ಕೋಟಿ ರೂ. ಕೊಟ್ಟರೂ ಸಾಕು. ಹೇಗೂ ನಡೆಸಿಕೊಂಡು ಹೋಗಬಹುದು. ರಾಜಕಾರಣಿಗಳು ಅಥವಾ ಜನಪ್ರತಿನಿಧಿಗಳು ದೂರದೃಷ್ಟಿ ಇಟ್ಟುಕೊಳ್ಳಬೇಕು. ಮಂಗಳೂರು ವಿವಿಗೆ ಕೊಡಗು ವಿವಿ ಸೇರಿಸಿ ಆ ವಿವಿಯ ಭಾರವನ್ನು ಹೆಚ್ಚಿಸೋದಕ್ಕಿಂತ ನಮ್ಮಲ್ಲಿಯೇ ಉಳಿಸಿಕೊಂಡರೆ ಮುಂದಿನ ಹತ್ತು ವರ್ಷಗಳಲ್ಲಿ ಕೊಡಗಿನಲ್ಲಿ ಮಹಾವಿದ್ಯಾಲಯಗಳ ಸಂಖ್ಯೆ ಹೆಚ್ಚುತ್ತದೆ ಎಂದಿದ್ದಾರೆ.

ವಿವಿ ಕುಲಪತಿಗಳನ್ನು ಜೊತೆಯಲ್ಲಿ ಒಯ್ದು ಸಂಪುಟ ಸಮಿತಿಯ ಸದಸ್ಯರಲ್ಲೊಬ್ಬರಾದ ಸಚಿವ ಹೆಚ್.ಸಿ.ಮಹದೇವಪ್ಪ, ಕೊಡಗು ಉಸ್ತುವಾರಿ ಸಚಿವ ಭೋಸರಾಜು ಅವರನ್ನು ಭೇಟಿಯಾಗಿ ವಾಸ್ತವ ವಿವರಿಸಲಾಗಿದೆ.
ಕೊಡಗಿನ ಮಂದಿ ಒಗ್ಗೂಡಿ ರಾಜಕೀಯ ರಹಿತವಾದ ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಬೇಕು. ಕೊಡಗಿನ ಜನಪ್ರತಿನಿಧಿಗಳು ಕೂಡ ಜನರ ಪರ ನಿಂತು ಸರ್ಕಾರಕ್ಕೆ ಒತ್ತಾಯ ಮಾಡಬೇಕು.
ನಾವು ರಾಜ್ಯದ ಒಂಭತ್ತು ವಿವಿ ಗಳ ಬಗ್ಗೆ ಮಾತಾಡಲ್ಲ. ಕೊಡಗು ಗುಡ್ಡ ಗಾಡು ಪ್ರದೇಶ. ಇಲ್ಲಿ ಬುಡಕಟ್ಟು, ಪರಿಶಿಷ್ಟ ಜಾತಿ, ವರ್ಗ ಹಾಗೂ ಪಂಗಡಗಳಿಗೆ ಸೇರಿದ ಬಹಳಷ್ಟು ಮಂದಿ ಇದ್ದಾರೆ. ಹಾಗಾಗಿ ಇಲ್ಲಿಯ ಪರಿಸ್ಥಿತಿಯೇ ಬೇರೆ ಇದೆ. ಸಾಕ್ಷರರ ಸಂಖ್ಯೆಯೂ ಕ್ಷೀಣವಾಗಿದೆ. ಹಾಗಾಗಿ ಎಲ್ಲವನ್ನು ಸರ್ಕಾರಕ್ಕೆ ವಿವರಿಸಬೇಕು ಎಂದು ಹೇಳಿದ್ದಾರೆ.

ಕೊಡಗು ವಿವಿಯಲ್ಲಿ ಮತ್ತೆ ಹೊಸದಾಗಿ ಪ್ರವಾಸೋದ್ಯಮ ಹಾಗೂ ಹೋಟೆಲ್ ಮೇನೇಜ್ ಮೆಂಟ್ ಕೋರ್ಸ್ ಅತೀ ಅಗತ್ಯವಿದ್ದು ಬೇಗ ಆರಂಭಿಸುವುದು ಸೂಕ್ತವಾಗಿದ್ದು ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗಲಿದೆ.
ವೀರರು, ಯೋಧರು ಹಾಗೂ ಕ್ರೀಡಾಕಲಿಗಳ ಜಿಲ್ಲೆ ಕೊಡಗು ಜಿಲ್ಲೆಯ ವಿವಿ ಕುಲಪತಿಗಳಿಗೆ ಕ್ಯಾಂಪಸ್ ನಲ್ಲಿ ವಸತಿ ನಿಲಯವಿಲ್ಲ. ಓಡಾಡೋಕೆ ಒಂದು ಕಾರು ಕೂಡ ಇಲ್ಲ ಅಂದರೆ ಇದು ನಾಚಿಕೆಗೇಡಿನ ವಿಷಯ.
ಆದ್ದರಿಂದ ಸರ್ಕಾರ ಕೊಡಗು ವಿವಿ ಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ನಾನು ಕೊಡಗು ವಿವಿ ಉಳಿವಿಗೋಸ್ಕರ ನ್ಯಾಯಾಲಯದಲ್ಲಿ ಹೋರಾಟ ನಡೆಸಲೂ ಕೂಡ ಸಿದ್ಧನಿದ್ದೇನೆ ಎಂದು ಚಂದ್ರಮೌಳಿ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

2 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago