ಕೊಡಗು

ಕೊಡಗು ವಿವಿ ಉಳಿಸಲು ಕಾನೂನು ಹೋರಾಟಕ್ಕೂ ಸಿದ್ಧ

ಮಡಿಕೇರಿ: ಜನರಿಗೆ ಹತ್ತಿರದ ಶಿಕ್ಷಣ ಸಿಗಬೇಕು ಎಂಬ ಮಹತ್ವದ ಉದ್ದೇಶದಿಂದಲೇ ಕೊಡಗು ವಿವಿ ಆರಂಭಿಸಿರೋದು. ಹಾಗಾಗಿ ಹಣಕಾಸು ಅಥವಾ ಅನುದಾನದ ಕಾರಣದಿಂದ ಕೊಡಗು ವಿವಿ ಮುಚ್ಚಲು ಸರ್ಕಾರ ಮುಂದಾದರೆ ಕಾನೂನು ಹೋರಾಟ ನಡೆಸುವುದಾಗಿ ರಾಜ್ಯ ಉಚ್ಛನ್ಯಾಯಾಲಯದ ವಕೀಲರೂ ಆದ ಕಾಂಗ್ರೆಸ್ ಮುಖಂಡ ಹೆಚ್.ಎಸ್.ಚಂದ್ರಮೌಳಿ ಹೇಳಿದ್ದಾರೆ.

ರಾಜ್ಯದ ಬೇರೆ ವಿವಿಗಳಿಗೆ ಇರುವ ಪರಿಸ್ಥಿತಿ ಕೊಡಗು ವಿವಿಗೆ ಇಲ್ಲ. ಕೊಡಗು ವಿವಿ ಉಳಿಸಲು ರಾಜಕೀಯ ರಹಿತವಾದ ಹೋರಾಟದ ಅನಿವಾರ್ಯತೆ ಇದೆ. ನಮ್ಮ ಜಿಲ್ಲೆಯ ಬಡ ವಿದ್ಯಾರ್ಥಿಗಳು ವಿವಿ ಇಲ್ಲ ಎಂಬ ಕಾರಣಕ್ಕೆ ಹೊರ ಜಿಲ್ಲೆಗಳಿಗೆ ಹೋಗಿ ಉನ್ನತ ಶಿಕ್ಷಣ ಪಡೆಯದಂತಹ ಕೆಟ್ಟ ವಾತಾವರಣ ನಿರ್ಮಾಣ ವಾಗಕೂಡದು. ಲಾಭದಲ್ಲಿಯೇ ನಡೆಸಲು ಇದೇನು ಉದ್ಯಮವಲ್ಲ. ಹಾಗಾಗಿ ಲಾಭ ನಷ್ಟದ ಪ್ರಶ್ನೆ ಅಸಮಂಜಸ ಎಂದು ತಿಳಿಸಿದ್ದಾರೆ.

ಈಗ ಇರುವ ಕೊಡಗು ವಿವಿಗೆ ಸರ್ಕಾರ ಕನಿಷ್ಟ 10 ಕೋಟಿ ರೂ. ಕೊಟ್ಟರೂ ಸಾಕು. ಹೇಗೂ ನಡೆಸಿಕೊಂಡು ಹೋಗಬಹುದು. ರಾಜಕಾರಣಿಗಳು ಅಥವಾ ಜನಪ್ರತಿನಿಧಿಗಳು ದೂರದೃಷ್ಟಿ ಇಟ್ಟುಕೊಳ್ಳಬೇಕು. ಮಂಗಳೂರು ವಿವಿಗೆ ಕೊಡಗು ವಿವಿ ಸೇರಿಸಿ ಆ ವಿವಿಯ ಭಾರವನ್ನು ಹೆಚ್ಚಿಸೋದಕ್ಕಿಂತ ನಮ್ಮಲ್ಲಿಯೇ ಉಳಿಸಿಕೊಂಡರೆ ಮುಂದಿನ ಹತ್ತು ವರ್ಷಗಳಲ್ಲಿ ಕೊಡಗಿನಲ್ಲಿ ಮಹಾವಿದ್ಯಾಲಯಗಳ ಸಂಖ್ಯೆ ಹೆಚ್ಚುತ್ತದೆ ಎಂದಿದ್ದಾರೆ.

ವಿವಿ ಕುಲಪತಿಗಳನ್ನು ಜೊತೆಯಲ್ಲಿ ಒಯ್ದು ಸಂಪುಟ ಸಮಿತಿಯ ಸದಸ್ಯರಲ್ಲೊಬ್ಬರಾದ ಸಚಿವ ಹೆಚ್.ಸಿ.ಮಹದೇವಪ್ಪ, ಕೊಡಗು ಉಸ್ತುವಾರಿ ಸಚಿವ ಭೋಸರಾಜು ಅವರನ್ನು ಭೇಟಿಯಾಗಿ ವಾಸ್ತವ ವಿವರಿಸಲಾಗಿದೆ.
ಕೊಡಗಿನ ಮಂದಿ ಒಗ್ಗೂಡಿ ರಾಜಕೀಯ ರಹಿತವಾದ ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಬೇಕು. ಕೊಡಗಿನ ಜನಪ್ರತಿನಿಧಿಗಳು ಕೂಡ ಜನರ ಪರ ನಿಂತು ಸರ್ಕಾರಕ್ಕೆ ಒತ್ತಾಯ ಮಾಡಬೇಕು.
ನಾವು ರಾಜ್ಯದ ಒಂಭತ್ತು ವಿವಿ ಗಳ ಬಗ್ಗೆ ಮಾತಾಡಲ್ಲ. ಕೊಡಗು ಗುಡ್ಡ ಗಾಡು ಪ್ರದೇಶ. ಇಲ್ಲಿ ಬುಡಕಟ್ಟು, ಪರಿಶಿಷ್ಟ ಜಾತಿ, ವರ್ಗ ಹಾಗೂ ಪಂಗಡಗಳಿಗೆ ಸೇರಿದ ಬಹಳಷ್ಟು ಮಂದಿ ಇದ್ದಾರೆ. ಹಾಗಾಗಿ ಇಲ್ಲಿಯ ಪರಿಸ್ಥಿತಿಯೇ ಬೇರೆ ಇದೆ. ಸಾಕ್ಷರರ ಸಂಖ್ಯೆಯೂ ಕ್ಷೀಣವಾಗಿದೆ. ಹಾಗಾಗಿ ಎಲ್ಲವನ್ನು ಸರ್ಕಾರಕ್ಕೆ ವಿವರಿಸಬೇಕು ಎಂದು ಹೇಳಿದ್ದಾರೆ.

ಕೊಡಗು ವಿವಿಯಲ್ಲಿ ಮತ್ತೆ ಹೊಸದಾಗಿ ಪ್ರವಾಸೋದ್ಯಮ ಹಾಗೂ ಹೋಟೆಲ್ ಮೇನೇಜ್ ಮೆಂಟ್ ಕೋರ್ಸ್ ಅತೀ ಅಗತ್ಯವಿದ್ದು ಬೇಗ ಆರಂಭಿಸುವುದು ಸೂಕ್ತವಾಗಿದ್ದು ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗಲಿದೆ.
ವೀರರು, ಯೋಧರು ಹಾಗೂ ಕ್ರೀಡಾಕಲಿಗಳ ಜಿಲ್ಲೆ ಕೊಡಗು ಜಿಲ್ಲೆಯ ವಿವಿ ಕುಲಪತಿಗಳಿಗೆ ಕ್ಯಾಂಪಸ್ ನಲ್ಲಿ ವಸತಿ ನಿಲಯವಿಲ್ಲ. ಓಡಾಡೋಕೆ ಒಂದು ಕಾರು ಕೂಡ ಇಲ್ಲ ಅಂದರೆ ಇದು ನಾಚಿಕೆಗೇಡಿನ ವಿಷಯ.
ಆದ್ದರಿಂದ ಸರ್ಕಾರ ಕೊಡಗು ವಿವಿ ಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ನಾನು ಕೊಡಗು ವಿವಿ ಉಳಿವಿಗೋಸ್ಕರ ನ್ಯಾಯಾಲಯದಲ್ಲಿ ಹೋರಾಟ ನಡೆಸಲೂ ಕೂಡ ಸಿದ್ಧನಿದ್ದೇನೆ ಎಂದು ಚಂದ್ರಮೌಳಿ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

3 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

4 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

4 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

4 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

5 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

5 hours ago