ಕೊಡಗು/ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ, ಮೀಸಲು ದುಬಾರೆ ಅರಣ್ಯ ಅಂಚಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಎರಡು ಕಾಡುಕೋಣಗಳು ಬಲಿಯಾದ ಘಟನೆ ಕುಶಾಲನಗರ ವಲಯ ಅರಣ್ಯ ಪ್ರದೇಶದ ದುಬಾರೆ ಅವರೆಗುಂದ ಅರಣ್ಯದಂಚಿನಲ್ಲಿ ನಡೆದಿದೆ.
ದುಷ್ಕರ್ಮಿಗಳು ರಾತ್ರಿ ಸುಮಾರು 10 ಗಂಟೆ ವೇಳೆಗೆ ಗುಂಡು ಹಾರಿಸಿದ ಶಬ್ದ ಕೇಳಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳ ಸಿಬ್ಬಂದಿಗಳು ಪರಿಶೀಲನೆ ಸಂದರ್ಭ ಅಂದಾಜು 10 ಹಾಗೂ 6 ವರ್ಷ ಪ್ರಾಯದ ಗಂಡು-ಹೆಣ್ಣು ಕಾಡುಕೋಣಗಳು ಗುಂಡೇಟಿನಿಂದ ಬಲಿಯಾಗಿರುವುದು ಕಂಡು ಬಂದಿದೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅರಣ್ಯದಂಚಿನಲ್ಲಿ ಆರೋಪಿಗಳಿಗಾಗಿ ಪತ್ತೆಗಾಗಿ ರಾತ್ರಿ ಹುಡುಕಾಟ ನಡೆಸಿದ್ದಾರೆ.
ಬೆಳಗ್ಗೆ ಸ್ಥಳಕ್ಕೆ ಡಿಎಫ್ಓ ಬಾಸ್ಕರ್, ಎಸಿಎಫ್ ಗೋಪಾಲ್, ಆರ್ಎಫ್ಓ ರತನ್ ಕುಮಾರ್, ಡಿಆರ್ಎಫ್ಓ ಹಂಸ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವನ್ಯಜೀವಿ ವೈದ್ಯ ಡಾ. ಚೆಟ್ಟಿಯಪ್ಪ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರ ಮಾಡಲಾಯಿತು. ಈ ಸಂಬಂಧ ಪ್ರಕರಣ ದಾಖಲಾಗಿದೆ
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…