ಕೊಡಗು/ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ, ಮೀಸಲು ದುಬಾರೆ ಅರಣ್ಯ ಅಂಚಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಎರಡು ಕಾಡುಕೋಣಗಳು ಬಲಿಯಾದ ಘಟನೆ ಕುಶಾಲನಗರ ವಲಯ ಅರಣ್ಯ ಪ್ರದೇಶದ ದುಬಾರೆ ಅವರೆಗುಂದ ಅರಣ್ಯದಂಚಿನಲ್ಲಿ ನಡೆದಿದೆ.
ದುಷ್ಕರ್ಮಿಗಳು ರಾತ್ರಿ ಸುಮಾರು 10 ಗಂಟೆ ವೇಳೆಗೆ ಗುಂಡು ಹಾರಿಸಿದ ಶಬ್ದ ಕೇಳಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳ ಸಿಬ್ಬಂದಿಗಳು ಪರಿಶೀಲನೆ ಸಂದರ್ಭ ಅಂದಾಜು 10 ಹಾಗೂ 6 ವರ್ಷ ಪ್ರಾಯದ ಗಂಡು-ಹೆಣ್ಣು ಕಾಡುಕೋಣಗಳು ಗುಂಡೇಟಿನಿಂದ ಬಲಿಯಾಗಿರುವುದು ಕಂಡು ಬಂದಿದೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅರಣ್ಯದಂಚಿನಲ್ಲಿ ಆರೋಪಿಗಳಿಗಾಗಿ ಪತ್ತೆಗಾಗಿ ರಾತ್ರಿ ಹುಡುಕಾಟ ನಡೆಸಿದ್ದಾರೆ.
ಬೆಳಗ್ಗೆ ಸ್ಥಳಕ್ಕೆ ಡಿಎಫ್ಓ ಬಾಸ್ಕರ್, ಎಸಿಎಫ್ ಗೋಪಾಲ್, ಆರ್ಎಫ್ಓ ರತನ್ ಕುಮಾರ್, ಡಿಆರ್ಎಫ್ಓ ಹಂಸ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವನ್ಯಜೀವಿ ವೈದ್ಯ ಡಾ. ಚೆಟ್ಟಿಯಪ್ಪ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರ ಮಾಡಲಾಯಿತು. ಈ ಸಂಬಂಧ ಪ್ರಕರಣ ದಾಖಲಾಗಿದೆ
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…