ಕೊಡಗು

ಕೊಡಗು: ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣಗಳ ಬಲಿ

ಕೊಡಗು/ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ, ಮೀಸಲು ದುಬಾರೆ ಅರಣ್ಯ ಅಂಚಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಎರಡು ಕಾಡುಕೋಣಗಳು ಬಲಿಯಾದ ಘಟನೆ ಕುಶಾಲನಗರ ವಲಯ ಅರಣ್ಯ ಪ್ರದೇಶದ ದುಬಾರೆ ಅವರೆಗುಂದ ಅರಣ್ಯದಂಚಿನಲ್ಲಿ ನಡೆದಿದೆ.

ದುಷ್ಕರ್ಮಿಗಳು ರಾತ್ರಿ ಸುಮಾರು 10 ಗಂಟೆ ವೇಳೆಗೆ ಗುಂಡು ಹಾರಿಸಿದ ಶಬ್ದ ಕೇಳಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳ ಸಿಬ್ಬಂದಿಗಳು ಪರಿಶೀಲನೆ ಸಂದರ್ಭ ಅಂದಾಜು 10 ಹಾಗೂ 6 ವರ್ಷ ಪ್ರಾಯದ ಗಂಡು-ಹೆಣ್ಣು ಕಾಡುಕೋಣಗಳು ಗುಂಡೇಟಿನಿಂದ ಬಲಿಯಾಗಿರುವುದು ಕಂಡು ಬಂದಿದೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅರಣ್ಯದಂಚಿನಲ್ಲಿ ಆರೋಪಿಗಳಿಗಾಗಿ ಪತ್ತೆಗಾಗಿ ರಾತ್ರಿ ಹುಡುಕಾಟ ನಡೆಸಿದ್ದಾರೆ.

ಬೆಳಗ್ಗೆ ಸ್ಥಳಕ್ಕೆ ಡಿಎಫ್‌ಓ ಬಾಸ್ಕರ್, ಎಸಿಎಫ್ ಗೋಪಾಲ್, ಆರ್‌ಎಫ್‌ಓ ರತನ್ ಕುಮಾರ್, ಡಿಆರ್‌ಎಫ್‌ಓ ಹಂಸ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವನ್ಯಜೀವಿ ವೈದ್ಯ ಡಾ. ಚೆಟ್ಟಿಯಪ್ಪ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರ ಮಾಡಲಾಯಿತು. ಈ ಸಂಬಂಧ ಪ್ರಕರಣ ದಾಖಲಾಗಿದೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago