ಕೊಡಗು

ಮಡಿಕೇರಿ: ಮತ್ತೆ ಚೇತರಿಕೆಯತ್ತ ಕೆಎಸ್‌ಆರ್‌ಟಿಸಿ ಆದಾಯ..!

ಮಡಿಕೇರಿ: ಮಳೆ ಸೇರಿದಂತೆ ಹಲವು ಕಾರಣಗಳಿಂದ ಕುಸಿತಕಂಡಿದ್ದ ಕೆಎಸ್‌ಆರ್‌ಟಿಸಿ ಆದಾಯ ಮತ್ತೆ ಚೇತರಿಕೆ ಕಾಣುತ್ತಿದ್ದು, ದಸರಾ ವೇಳೆಯಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಳಗೊಂಡು ಲಾಭದ ನಿರೀಕ್ಷೆ ಹೊಂದಲಾಗಿದೆ.

ಕಳೆದ ವರ್ಷ ಜೂ. ೧೧ರಿಂದ ಆರಂಭಗೊಂಡ ಕೆಎಸ್‌ಆರ್‌ಟಿಸಿ ಶಕ್ತಿ ಯೋಜನೆಯಡಿ ಪ್ರಯಾಣಿ ಸುತ್ತಿರುವ ಮಹಿಳೆಯರ ಸಂಖ್ಯೆ ಕಳೆದೆರಡು ತಿಂಗಳುಗಳಿಂದ ಇಳಿಮುಖವಾಗಿತ್ತು. ಈ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಅತಿ ಹೆಚ್ಚು ಮಹಿಳೆ ಯರು ಶಕ್ತಿ ಯೋಜನೆಯ ಲಾಭ ಪಡೆದರೆ, ಜೂನ್‌ನಲ್ಲಿ ಮಹಿಳೆಯರು ಸೇರಿದಂತೆ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ತೀವ್ರ ಕುಸಿತ ಕಂಡಿತ್ತು. ಸದ್ಯ ಮತ್ತೆ ಪ್ರಯಾಣಿಕರ ಸಂಖ್ಯೆಯಲ್ಲಿ ಚೇತರಿಕೆ ಕಾಣುತ್ತಿದ್ದು, ಮುಂದಿನ ಹಬ್ಬದ ಋತುವಿನಲ್ಲಿ ಈ ಸಂಖ್ಯೆಮತ್ತೆ ಹೆಚ್ಚಳ ವಾಗಿ ಯಥಾ ಸ್ಥಿತಿಗೆ ಬರುವ ಸಾಧ್ಯತೆ ಇದೆ ಎಂಬುದು ಕೆಎಸ್‌ಆರ್‌ಟಿಸಿ ನಿರೀಕ್ಷೆ. ಕೊಡಗಿನ ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ಬಸ್ಸುಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ಇದರಿಂದ ಏಪ್ರಿಲ್ ತಿಂಗಳಲ್ಲಿ ೨ ಕೋಟಿ ರೂ. ಆದಾಯ ಗಳಿಸಿದರೆ, ಮೇ ತಿಂಗಳಲ್ಲಿ ಬರೋಬ್ಬರಿ ೨. ೨೧ ಕೋಟಿ ರೂ. ಆದಾಯ ಬಂದಿದೆ. ಜೂನ್ ತಿಂಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಶಕ್ತಿ ಯೋಜನೆಯ ಆದಾಯ ೧.೮ ಕೋಟಿ ರೂ. ಗೆ ಇಳಿಕೆಯಾಗಿದೆ. ಜುಲೈ ತಿಂಗಳಲ್ಲಿ ಅತಿ ಕಡಿಮೆ ಎಂಬಂತೆ ೧. ೬೭ ಕೋಟಿ ರೂ. ಆಗಸ್ಟ್ ತಿಂಗಳಲ್ಲಿ ಈ ಸಂಖ್ಯೆ ೧. ೭೮ ಕೋಟಿ ರೂ. ನಷ್ಟಿತ್ತು. ಸೆ. ೧೬ರ ವರೆಗೆ ಒಟ್ಟು ೨,೫೭,೧೭೦ ಮಂದಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದು, ೧ ಕೋಟಿ ರೂ. ವಹಿವಾಟು ನಡೆದಿದೆ. ಪ್ರಯಾಣಿಕರ ಕುಸಿತಕ್ಕೆ ಹಲವು ಕಾರಣ ಗಳಿದ್ದು, ಮಳೆ ಪ್ರಮುಖ ಕಾರಣವಾದರೆ, ಆಷಾಢ, ಶ್ರಾವಣ ಮುಂತಾದ ಆಚರಣೆಗಳ ಹಿನ್ನೆಲೆಯಲ್ಲಿಯೂ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ.

ಪುತ್ತೂರು ವಿಭಾಗ ಮಟ್ಟದಲ್ಲಿ ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ದೇವಾಲಯ ಗಳಿಗೆ ರಾಜ್ಯದೆಲ್ಲೆಡೆಯಿಂದ ಬಸ್ ಸಂಪರ್ಕ ವಿದ್ದು, ಶಕ್ತಿ ಯೋಜನೆಯಡಿ ಅತಿ ಹೆಚ್ಚು ಮಹಿಳೆಯರು ಪ್ರಯಾಣಿಸುವ ಸ್ಥಳಗಳ ಪೈಕಿ ಇವು ಪ್ರಮುಖವಾಗಿವೆ. ಈ ಎರಡೂ ದೇವಾ ಲಯಗಳಿಗೆ ಶಕ್ತಿ ಯೋಜನೆಯಡಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆಯೂ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಭಾರೀ ಪ್ರಮಾಣದಲ್ಲಿ ಕುಸಿದಿತ್ತು ಎಂದು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ಅಽಕಾರಿಗಳು ಮಾಹಿತಿ ನೀಡಿದ್ದಾರೆ. ಧರ್ಮಸ್ಥಳಕ್ಕೆ ಬರುವ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಈಗ ಮತ್ತೆ ಚೇತರಿಕೆ ಕಾಣುತ್ತಿದ್ದು, ಕಳೆದೊಂದು ವಾರದಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದೆ.

ಬಸ್‌ಗಳ ಸಂಖ್ಯೆ ಹೆಚ್ಚಳ ಶಕ್ತಿ ಯೋಜನೆ ಜಾರಿಯಾದ ಬಳಿಕ ಮಡಿಕೇರಿ ಘಟಕಕ್ಕೆ ೧೦ ಹೊಸ ಬಸ್‌ಗಳನ್ನು ನೀಡಲಾಗಿದ್ದು, ಕೊರೊನಾ ಸಂದರ್ಭದಲ್ಲಿ ಸ್ಥಗಿತಗೊಳಿಸ ಲಾಗಿದ್ದ ಮಾರ್ಗಗಳನ್ನು ಪುನರಾರಂಭಿಸಲಾಗಿದೆ. ಈ ಅವಽಯಲ್ಲಿ ಒಟ್ಟು ೧೮ ಹೊಸ ಮಾರ್ಗಗಳನ್ನು ಆರಂಭಿಸಲಾಗಿದೆ. ಮಳೆ ಮತ್ತಿತರ ಕಾರಣಗಳಿಂದಾಗಿ ಜೂನ್ ತಿಂಗಳ ಬಳಿಕ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿತ್ತು.

ಮಡಿಕೇರಿ ಘಟಕ ಮಾತ್ರವಲ್ಲದೇ ಇತರ ಕಡೆಯೂ ಈ ವ್ಯತ್ಯಾಸ ಕಳೆದ ೩ ತಿಂಗಳಲ್ಲಿ ಕಂಡುಬಂದಿದೆ. ಕಳೆದೊಂದು ವಾರದಿಂದ ಚೇತರಿಕೆ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ದಸರಾ ಮಹೋತ್ಸವ ಮತ್ತಿತರ ಕಾರಣಗಳಿಂದ ಪ್ರಯಾಣಿಕರು ಹೆಚ್ಚಾಗುವ ಸಾಧ್ಯತೆಯಿದೆ. -ಎಂ. ಎಂ. ಮೆಹಬೂನ್ ಅಲಿ, ಘಟಕ ವ್ಯವಸ್ಥಾಪಕರು

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

7 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago