Categories: ಕೊಡಗು

ಕುಶಾಲನಗರ: ನ. 19 ರಂದು ಗಣಪತಿ ರಥೋತ್ಸ ವ

ಪುನೀತ್ ಮಡಿಕೇರಿ

ಮಡಿಕೇರಿ: ಕೊಡಗಿನ ಅತ್ಯಂತ ದೊಡ್ಡ ರಥೋತ್ಸವ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಕುಶಾಲನಗರ ಶ್ರೀ ಗಣಪತಿ ರಥೋತ್ಸವವು ನ. 19ರಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ.

ಯಶಸ್ವಿ ಸಂಘಟಕರಾಗಿರುವ ಉದ್ಯಮಿ ಎಂ. ಕೆ. ದಿನೇಶ್ ಅವರು ಶ್ರೀ ಗಣಪತಿ ದೇವಸ್ಥಾನ ಸೇವಾ ಸಮಿತಿ ಅಧ್ಯPರಾದ ನಂತರ ಅವರಿಗೆ ಇದು ಮೊದಲ ಜಾತ್ರೋತ್ಸವವಾಗಿದ್ದು, ಸ್ಥಳೀಯರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಕೊಡಗು, ಮೈಸೂರು ಹಾಗೂ ಹಾಸನ ಜಿಗಳ ವಾತಾವರಣ ಮತ್ತು ಸಂಸ್ಕೃತಿಗಳ ಸಂಗಮವಾಗಿ ರುವ ಕೊಡಗಿನ ವಾಣಿಜ್ಯನಗರಿ ಕುಶಾಲ ನಗರದಲ್ಲಿ ಪ್ರತಿ ವರ್ಷ ನಡೆಯುವ ಶ್ರೀ ಗಣಪತಿ ರಥೋತ್ಸವಕ್ಕೆ ಈ ಮೂರೂ ಜಿಗಳ ಜನತೆ ಸಾಕ್ಷಿಯಾಗುವುದು ವಿಶೇಷ. ಈ ವರ್ಷ ಗಣಪತಿ ರಥೋತ್ಸವವು ನ. ೧೯ರ ಮಂಗಳವಾರ ಮಧ್ಯಾಹ್ನ ೧೨ ಗಂಟೆಗೆ ನಡೆಯಲಿದೆ. ನ. ೨೫ರವರೆಗೆ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ.

೧೯೫೫ರ ತನಕ ೩ ದಿನಗಳ ಕಾಲ ನಡೆಯುತ್ತಿದ್ದ ಶ್ರೀ ಗಣಪತಿ ಜಾತ್ರೋತ್ಸವ ೧೯೫೮ರಲ್ಲಿ ೭ ದಿನಗಳಿಗೆ ವಿಸ್ತರಣೆಯಾಯಿತು. ಈಗ ೧೦ ದಿನಗಳವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಜಾತ್ರೋತ್ಸವ ನಡೆಯುತ್ತಿದೆ.

ನ. ೧೬ರಿಂದ ಶ್ರೀ ಗಣಪತಿ ಜಾತ್ರೋತ್ಸವ ಹಿನ್ನೆಲೆಯಲ್ಲಿ ಪುಣ್ಯಾಹ, ನಾಂದಿ, ರಕ್ಷಾಬಂಧನ, ಅಂಕುರಾರ್ಪಣ, ಕಳಸ ಸ್ಥಾಪನೆ, ನವಗ್ರಹ ಹೋಮ ಹೀಗೆ ಆರಂಭವಾಗುವ ಧಾರ್ಮಿಕ ವಿಽ-ವಿಧಾನಗಳು ನ. ೨೫ರವರೆಗೂ ನಡೆಯ ಲಿವೆ. ಚಂದ್ರಬಿಂಬೋತ್ಸವ ಪಲ್ಲಕ್ಕಿ ಸೇವೆಯನ್ನು ಈ ಬಾರಿ ವಿಶಿಷ್ಟವಾಗಿ ನಡೆಸಲಾಗುವುದು ಎಂದು ದೇವಾಲಯದ ಪ್ರಧಾನ ಅರ್ಚಕ ಆರ್. ಕೆ. ನಾಗೇಂದ್ರ ಬಾಬು ಮಾಹಿತಿ ನೀಡಿದ್ದಾರೆ.

ಪ್ರಮುಖ ಆಕರ್ಷಣೆ ಗೋವುಗಳ ಜಾತ್ರೆ: ಕುಶಾಲನಗರ ಜಾತ್ರೆಯ ಪ್ರಮುಖ ಆಕರ್ಷಣೆಗಳಲ್ಲಿ ಗೋವುಗಳ ಜಾತ್ರೆಯೂ ಒಂದು. ಕುಶಾಲನಗರ ಮಾತ್ರವಲ್ಲದೆ ಪಕ್ಕದ ಮೈಸೂರು ಜಿಯ ಪಿರಿಯಾಪಟ್ಟಣ ತಾಲ್ಲೂಕು ಮತ್ತು ಹಾಸನ ಜಿಯ ಅರಕಲಗೂಡು ತಾಲ್ಲೂಕಿನ ರೈತರು ಕೂಡ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದರು. ಗೋವು ಪ್ರದರ್ಶನದ ಜತೆಗೆ ಗೋವುಗಳ ಮಾರಾಟವೂ ನಡೆಯುತ್ತಿದ್ದ ಕಾರಣ ದೊಡ್ಡ ಮಟ್ಟದ ವ್ಯವಹಾರವೂ ನಡೆಯುತ್ತಿತ್ತು. ಆದರೆ ವಿವಿಧ ಕಾರಣಗಳಿಂದ ಕೆಲವು ವರ್ಷಗಳಿಂದ ಈ ಗೋವು ಜಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.

ಈ ವರ್ಷ ಮರು ಚಾಲನೆ ನೀಡಲಾಗುತ್ತಿದೆ. ಹಳೆಯ ವೈಭವದೊಂದಿಗೆ ಆಧುನಿಕತೆಯ ಸ್ಪರ್ಶ ನೀಡಿ ಗೋವು ಜಾತ್ರೆ ನಡೆಸಲು ದೇವಾಲಯ ಸಮಿತಿ ನಿರ್ಧರಿಸಿದೆ. ಈ ಸಂಬಂಧ ಈಗಾಗಲೇ ಸುತ್ತ ಮುತ್ತಲ ವ್ಯಾಪ್ತಿಯ ರೈತರ ಜತೆ ಚರ್ಚೆಯನ್ನೂ ನಡೆಸಲಾಗಿದ್ದು, ಉತ್ತಮ ಸ್ಪಂದನೆ ಸಿಕ್ಕಿರುವುದು ಸಮಿತಿ ಸದಸ್ಯರ ಉತ್ಸಾಹವನ್ನು ಹೆಚ್ಚಿಸಿದೆ. ಡಿ. ೭, ೮ ಹಾಗೂ ೯ರಂದು ಜಾತ್ರಾ ಮೈದಾನದಲ್ಲಿ ಗೋವು ಜಾತ್ರೆ ಏರ್ಪಡಿಸಲಾಗಿದೆ. ಇಲ್ಲಿ ಭಾಗವಹಿಸುವ ರೈತರಿಗೆ ಮತ್ತು ಗೋವುಗಳಿಗೆ ಸಮಿತಿ ವತಿಯಿಂದ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಗೋವುಗಳ ಪ್ರದರ್ಶನವೂ ಇರುವುದರಿಂದ ವಿವಿಧ ವಿಭಾಗಗಳಲ್ಲಿ ಬಹುಮಾನವನ್ನೂ ಕೊಡಲು ನಿರ್ಧರಿಸಲಾಗಿದೆ.

ಕೃಷಿ ಮೇಳ, ಸಾಂಸ್ಕೃತಿಕ ಕಾರ್ಯಕ್ರಮ: ಇದೇ ಮೊದಲ ಬಾರಿಗೆ ಕೃಷಿ ಮೇಳವನ್ನು ಆಯೋಜಿಸಿರುವುದು ಜಾತ್ರೋತ್ಸವದ ವಿಶೇಷ ವಾಗಿದೆ. ಕೃಷಿಯಲ್ಲಿ ಆಧುನಿಕತೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟಕ್ಕೂ ಇಲ್ಲಿ ವ್ಯವಸ್ಥೆ ಮಾಡಿಕೊಡಲಾಗಿದೆ. ಜಾತ್ರೋತ್ಸವದಲ್ಲಿ ಆಕರ್ಷಣೀಯ ಕಾರ್ಯಕ್ರಮಗಳನ್ನು ಕೊಡಲು ಸಾಂಸ್ಕೃತಿಕ ಸಮಿತಿ ಸಿದ್ಧತೆ ನಡೆಸಿದೆ. ನ. ೧೯ರಂದು ಸಾಂಸ್ಕೃತಿಕ ವೇದಿಕೆ ಉದ್ಘಾಟಿಸುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಡಿ. ೧ರ ತನಕ ೧೩ ದಿನಗಳ ಕಾಲವೂ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ದಿನ ಸಂಜೆ ೭ರಿಂದ ರಾತ್ರಿ ೧೦ ಗಂಟೆಯವರೆಗೆ ಪ್ರಸಿದ್ಧ ಕಲಾವಿದರು, ಸ್ಥಳೀಯ ಪ್ರತಿಭೆಗಳೂ ಇಲ್ಲಿ ಪ್ರದರ್ಶನ ನೀಡಲಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು: ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ

ಡೆಹರಾಡೂನ್:‌ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…

18 mins ago

ರಣ ಬಿಸಿಲ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

29 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…

32 mins ago

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

53 mins ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

57 mins ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

1 hour ago