ಮಡಿಕೇರಿ: ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೈಚನಹಳ್ಳಿ ನಿವಾಸಿ ಪ್ರಮೋದ್ ಕುಮಾರ್(೩೪), ರವಿಕುಮಾರ್(೨೨), ನಿಖಿಲ್ ಕುಮಾರ್(೨೪), ರಾಧಾಕೃಷ್ಣ ಬಡಾವಣೆ ನಿವಾಸಿ ದರ್ಶನ್(೨೧), ಯೋಗಾನಂದ ಬಡಾವಣೆ ನಿವಾಸಿ ಶರತ್ ನಾಯಕ್(೨೫) ಬಂಧಿತ ಆರೋಪಿಗಳು.
ಫೆ.೨೫ರಂದು ಬೈಚನಹಳ್ಳಿಯ ಜಾತ್ರೆ ಮೈದಾನದ ಸಮೀಪದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಪ್ರಮೋದ್ ಕುಮಾರ್ ಹಾಗೂ ದರ್ಶನ್ನನ್ನು ಬಂಧಿಸಿದ್ದಾರೆ. ಜೊತೆಗೆ ೨೫ ಗ್ರಾಂ ಗಾಂಜಾ ವನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಫೆ.೨೬ರಂದು ಬೈಚನಹಳ್ಳಿಯ ರೈತ ಸಹಕಾರ ಭವನದ ಸಮೀಪ ಗಾಂಜಾ ಬಳಕೆ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಮತ್ತೆ ಪೊಲೀಸರ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ರವಿಕುಮಾರ್, ನಿಖಿಲ್ ಕುಮಾರ್, ಶರತ್ ನಾಯಕ್ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸೋಮವಾರಪೇಟೆ ಉಪವಿಭಾಗ ಡಿಎಸ್ಪಿ ಆರ್.ವಿ.ಗಂಗಾಧರಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕುಶಾಲನಗರ ನಗರ ಪೊಲೀಸ್ ಠಾಣೆಯ ಪಿಐ ಬಿ.ಜಿ. ಪ್ರಕಾಶ್ , ಪಿಎಸ್ಐ ಗೀತಾ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಎರಡು ಪ್ರತ್ಯೇಕ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ಅಧಿಕ್ಷಕ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…