ಕೊಡಗು

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ

ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ ನಡೆಸಿದ್ದು, ಕುಪ್ಪಳ್ಳಿಯಲ್ಲಿರುವ ಮನೆಯಂತೆ ಮೈಸೂರಿನಲ್ಲಿಯೂ ಕೂಡ ಉದಯರವಿ ಎಂಬ ಕುವೆಂಪುರವರ ಮನೆಯನ್ನು ಸಂಗ್ರಹಾಲಯವನ್ನಾಗಿ ಮಾಡಿ ಅಲ್ಲಿ ಅವರು ಬಳಸುತ್ತಿದ್ದ ಪುಸ್ತಕಗಳ ಪ್ರತಿ, ಹಲವಾರು ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗುತ್ತದೆ. ಇದು 2026ರ ಡಿ.29ರಂದು ಪ್ರಾರಂಭವಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಚಿದಾನಂದಗೌಡ ತಿಳಿಸಿದರು.

ಕೊಡಗು ವಿಶ್ವವಿದ್ಯಾಲಯದ ಕಾವೇರಿ ಆವರಣದ ಹಾರಂಗಿ ಸಭಾಂಗಣದಲ್ಲಿ ಕನ್ನಡಸಿರಿ ಸ್ನೇಹ ಬಳಗ, ಹಾಗೂ ನಾಡಪ್ರಭು ಪತ್ತಿನ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವಮಾನವ ಕುವೆಂಪುರವರ ಜನ್ಮೋತ್ಸವ ಮತ್ತು-ಸಮಗ್ರ ಸಾಹಿತ್ಯದ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಹಾಗೂ ರಸಪ್ರಶ್ನೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕುವೆಂಪು ಅವರ ವಿಶ್ವ ಮಾನವ ಸಂದೇಶವನ್ನು ಪಂಪ ಹೇಳಿದಂತೆ ಮಾನವ ಕುಲಂ ತಾನೊಂದೆ ವಲಂ ಎಂಬ ತತ್ವದ ಅಡಿಯಲ್ಲಿ ಜಾತಿ, ಧರ್ಮ, ಭಾಷೆಗಳ ಬೇಲಿಯನ್ನು ಕಳಚಿ ಪ್ರತಿಯೊಬ್ಬರೂ ಸಂಕುಚಿತ ಮನೋಭಾವನೆಯಿಂದ ಹೊರಬರಬೇಕು. ಮಂತ್ರ ಮಾಂಗಲ್ಯ ಪರಿಕಲ್ಪನೆಯು ಕುವೆಂಪುರವರು ಹಿಂದೂ ವಿವಾಹಕ್ಕೆ ನೀಡಿದ ಸರಳ ವಿವಾಹ ಪದ್ಧತಿಯಾಗಿದೆ. ಇಂದಿನ ಸಮಾಜದಲ್ಲಿ ಪೋಷಕರು ಆಡಂಬರದ ವಿವಾಹಕ್ಕೆ ಸಿಲುಕಿ ತಮ್ಮ ಜೀವನವನ್ನು ಸಾಲದ ಕೂಪಕ್ಕೆ ಸಿಲುಕಿಸಿಕೊಳ್ಳುತ್ತಿದ್ದಾರೆ. ಅಂತವರಿಗೆ ಈ ಪರಿಕಲ್ಪನೆಯು ಒಂದು ಉತ್ತಮ ವಿಧಾನವಾಗಿದೆ ಎಂದರು.

ಶ್ರೀ ರಾಮಾಯಣ ದರ್ಶನಂ ಆಧುನಿಕ ಕಾಲದಲ್ಲಿನ ಮಹಾಕಾವ್ಯದ ವೈಶಿಷ್ಟತೆಯು ಮೂಲ ರಾಮಾಯಣಕ್ಕಿಂತ ವಿಭಿನ್ನ ಮತ್ತು ವಿಶೇಷವಾಗಿದೆ. ರಾಮನ ಆದರ್ಶಗಳು ಎದ್ದು ಕಾಣುತ್ತದೆ. ಕುವೆಂಪು ತಮ್ಮ ಸಾಹಿತ್ಯದಲ್ಲಿ ಕಾಡಿನ ಮೇಲೆ ಇದ್ದಂತಹ ಪ್ರೀತಿಯನ್ನು ಮತ್ತು ಆಸಕ್ತಿಯನ್ನು ತೋರ್ಪಡಿಸಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಮಾತನಾಡಿ, ಕುವೆಂಪು ಅವರ ಕಾವ್ಯದಲ್ಲಿ ವಿಶ್ವಮಾನವತಾವಾದ, ಆತ್ಮಶೋಧ, ಮನಸ್ಸಿನ ಅಂತರಂಗ, ಪ್ರಕೃತಿ-ಮಾನವ-ದೇವತೆಗಳ ಆಂತರಿಕ ಸಂಬಂಧದ ಸೂಕ್ಷ್ಮತೆ, ಭಾರತೀಯ ದಾರ್ಶನಿಕ ಪರಂಪರೆಯ ಸಂಧಾನಕ್ಕೆ ಅನುವು ಮಾಡಿಕೊಟ್ಟಿರುವುದನ್ನು ಕಾಣಬಹುದಾಗಿದೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 mins ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

48 mins ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

10 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

10 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

10 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

10 hours ago