ಕೊಡಗು

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ

ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ ನಡೆಸಿದ್ದು, ಕುಪ್ಪಳ್ಳಿಯಲ್ಲಿರುವ ಮನೆಯಂತೆ ಮೈಸೂರಿನಲ್ಲಿಯೂ ಕೂಡ ಉದಯರವಿ ಎಂಬ ಕುವೆಂಪುರವರ ಮನೆಯನ್ನು ಸಂಗ್ರಹಾಲಯವನ್ನಾಗಿ ಮಾಡಿ ಅಲ್ಲಿ ಅವರು ಬಳಸುತ್ತಿದ್ದ ಪುಸ್ತಕಗಳ ಪ್ರತಿ, ಹಲವಾರು ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗುತ್ತದೆ. ಇದು 2026ರ ಡಿ.29ರಂದು ಪ್ರಾರಂಭವಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಚಿದಾನಂದಗೌಡ ತಿಳಿಸಿದರು.

ಕೊಡಗು ವಿಶ್ವವಿದ್ಯಾಲಯದ ಕಾವೇರಿ ಆವರಣದ ಹಾರಂಗಿ ಸಭಾಂಗಣದಲ್ಲಿ ಕನ್ನಡಸಿರಿ ಸ್ನೇಹ ಬಳಗ, ಹಾಗೂ ನಾಡಪ್ರಭು ಪತ್ತಿನ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವಮಾನವ ಕುವೆಂಪುರವರ ಜನ್ಮೋತ್ಸವ ಮತ್ತು-ಸಮಗ್ರ ಸಾಹಿತ್ಯದ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಹಾಗೂ ರಸಪ್ರಶ್ನೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕುವೆಂಪು ಅವರ ವಿಶ್ವ ಮಾನವ ಸಂದೇಶವನ್ನು ಪಂಪ ಹೇಳಿದಂತೆ ಮಾನವ ಕುಲಂ ತಾನೊಂದೆ ವಲಂ ಎಂಬ ತತ್ವದ ಅಡಿಯಲ್ಲಿ ಜಾತಿ, ಧರ್ಮ, ಭಾಷೆಗಳ ಬೇಲಿಯನ್ನು ಕಳಚಿ ಪ್ರತಿಯೊಬ್ಬರೂ ಸಂಕುಚಿತ ಮನೋಭಾವನೆಯಿಂದ ಹೊರಬರಬೇಕು. ಮಂತ್ರ ಮಾಂಗಲ್ಯ ಪರಿಕಲ್ಪನೆಯು ಕುವೆಂಪುರವರು ಹಿಂದೂ ವಿವಾಹಕ್ಕೆ ನೀಡಿದ ಸರಳ ವಿವಾಹ ಪದ್ಧತಿಯಾಗಿದೆ. ಇಂದಿನ ಸಮಾಜದಲ್ಲಿ ಪೋಷಕರು ಆಡಂಬರದ ವಿವಾಹಕ್ಕೆ ಸಿಲುಕಿ ತಮ್ಮ ಜೀವನವನ್ನು ಸಾಲದ ಕೂಪಕ್ಕೆ ಸಿಲುಕಿಸಿಕೊಳ್ಳುತ್ತಿದ್ದಾರೆ. ಅಂತವರಿಗೆ ಈ ಪರಿಕಲ್ಪನೆಯು ಒಂದು ಉತ್ತಮ ವಿಧಾನವಾಗಿದೆ ಎಂದರು.

ಶ್ರೀ ರಾಮಾಯಣ ದರ್ಶನಂ ಆಧುನಿಕ ಕಾಲದಲ್ಲಿನ ಮಹಾಕಾವ್ಯದ ವೈಶಿಷ್ಟತೆಯು ಮೂಲ ರಾಮಾಯಣಕ್ಕಿಂತ ವಿಭಿನ್ನ ಮತ್ತು ವಿಶೇಷವಾಗಿದೆ. ರಾಮನ ಆದರ್ಶಗಳು ಎದ್ದು ಕಾಣುತ್ತದೆ. ಕುವೆಂಪು ತಮ್ಮ ಸಾಹಿತ್ಯದಲ್ಲಿ ಕಾಡಿನ ಮೇಲೆ ಇದ್ದಂತಹ ಪ್ರೀತಿಯನ್ನು ಮತ್ತು ಆಸಕ್ತಿಯನ್ನು ತೋರ್ಪಡಿಸಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಮಾತನಾಡಿ, ಕುವೆಂಪು ಅವರ ಕಾವ್ಯದಲ್ಲಿ ವಿಶ್ವಮಾನವತಾವಾದ, ಆತ್ಮಶೋಧ, ಮನಸ್ಸಿನ ಅಂತರಂಗ, ಪ್ರಕೃತಿ-ಮಾನವ-ದೇವತೆಗಳ ಆಂತರಿಕ ಸಂಬಂಧದ ಸೂಕ್ಷ್ಮತೆ, ಭಾರತೀಯ ದಾರ್ಶನಿಕ ಪರಂಪರೆಯ ಸಂಧಾನಕ್ಕೆ ಅನುವು ಮಾಡಿಕೊಟ್ಟಿರುವುದನ್ನು ಕಾಣಬಹುದಾಗಿದೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

4 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

4 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

4 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

5 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

5 hours ago