ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿ ಭೂ ಉಪಯೋಗದ ಕುರಿತು ಹೊಸ ನಿಯಮಾವಳಿ ರೂಪಿಸುವ ಅಗತ್ಯವಿದ್ದು, ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಇದರಿಂದ ಕೊಡಗಿನಲ್ಲಿಯೂ ಭೂ ಪರಿವರ್ತನೆಗೆ ತಾತ್ಕಾಲಿಕ ಬ್ರೇಕ್ ಬೀಳುವ ಸಾಧ್ಯತೆಯಿದೆ. ನೆರೆಯ ಕೇರಳದ ವಯನಾಡು ದುರಂತ ಸೇರಿದಂತೆ ರಾಜ್ಯದ ನಾನಾ ಕಡೆ ಸಂಭವಿಸಿದ ಭೂಕುಸಿತಗಳ ಬಳಿಕ ಪಶ್ಚಿಮ ಘಟ್ಟಗಳ ಸಂರಕ್ಷಣೆ ನಿಟ್ಟಿನಲ್ಲಿ ಅರಣ್ಯ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದರು. ಈಗ ಈ ಭಾಗದಲ್ಲಿ ನಿರಂತರವಾಗಿ ನಡೆಯುತ್ತಿರುವ ಭೂ ಪರಿವರ್ತನೆಗೂ ಬ್ರೇಕ್ ಹಾಕುವ ಬಗ್ಗೆ ತೀರ್ಮಾನಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಈಶ್ವರ್ ಖಂಡ್ರೆ ಅವರು, ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ ಉಪಯೋಗದ ರೀತಿ ಮತ್ತು ಭೂ ಪರಿವರ್ತನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ರೂಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…