rain (
ಸೋಮವಾರಪೇಟೆ: ಸಮೀಪದ ತೋಳುರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕಳೆದ ಕೆಲ ದಿನದಿಂದ ಸುರಿದ ಭಾರೀ ಮಳೆಗೆ ಭೂ ಕುಸಿತ ಉಂಟಾಗಿ ಅಪಾರ ಪ್ರಮಾಣದ ಕಾಫಿ ಗಿಡಗಳು ಹಾನಿಯಾಗಿವೆ.
ಕೂತಿ ಗ್ರಾಮದ ಡಿ.ಕೆ.ಪ್ರಕಾಶ್ ಎಂಬುವವರಿಗೆ ಸೇರಿದ ಜಾಗದಲ್ಲಿ ಕಳೆದ ರಾತ್ರಿ ಭೂ ಕುಸಿತ ಉಂಟಾಗಿದೆ. ಕೂತಿ-ಹೊಸೂರು ಹಾಗೂ ಶನಿವಾರಸಂತೆಗೆ ಸಂಪರ್ಕ ಕಲ್ಪಿಸುವ ಬೆಟ್ಟದ ರಸ್ತೆಯಲ್ಲಿ ಭೂಕುಸಿತವಾಗಿದ್ದು ಮಳೆ ಹೀಗೆಯೇ ಮುಂದುವರಿದರೆ ರಸ್ತೆಯೂ ಕುಸಿದು ಸಂಪರ್ಕ ಸ್ಥಗಿತವಾಗಲಿದೆ.
ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಕರಿಬಸವರಾಜು, ಪ್ರಭಾರ ಸಹಾಯ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ 2018ರಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾದ ಪ್ರದೇಶದ ಸಮೀಪದಲ್ಲೇ ಈ ಭಾರಿಯೂ ಭೂಕುಸಿತ ಕಂಡಿದ್ದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…