ಕೊಡಗು

ಕೊಡಗಿಗೆ ಭೂಕುಸಿತದ ಭೀತಿ: ಸಾವಿರಾರು ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್ ನೀಡಿದ ಜಿಲ್ಲಾಡಳಿತ

ಮಡಿಕೇರಿ: ಜುಲೈ 30 ರ ಮಧ್ಯರಾತ್ರಿ ವಯನಾಡಿನ ಜನ ನೆಮ್ಮದಿಯಾಗಿ ನಿದ್ರಿಸಿದ್ದ ಸಮಯ ಅದು, ಆ ಕ್ಷಣ ದೊಡ್ಡ ಸ್ಫೋಟವೊಂದು ಕೇಳಿಸಿತ್ತು ಅಷ್ಟೆ. ಮತ್ತೆ ಯಾವ ಸುಳಿವನ್ನು ನೀಡದ ಪ್ರಕೃತಿ ಯಮ ಸ್ವರೂಪಿಯಾಗಿ ಮಾನವನ ಮೇಲೆ ಎರಗಿತು. ಈ ಭೀಕರ ಭೂಕುಸಿತ ನಾಗರೀಕ ಸಮಾಜಕ್ಕೆ ಎಚ್ಚರಿಕೆಯ ಸಂದೇಶವಾಗಿದೆ.

ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ ಹಾಗೂ ರಾಜ್ಯದ ಹಲವೆಡೆ ಸಂಭವಿಸಿದ ಗುಡ್ಡ ಕುಸಿತಗಳಿಂದ ಎಚ್ಚೆತ್ತುಕೊಂಡಿರುವ ಕೊಡಗು ಜಿಲ್ಲಾಡಳಿತ ಇದೀಗ ಸಂಭಾವ್ಯ ಭೂಕುಸಿತದ ಪ್ರದೇಶಗಳನ್ನು ಪಟ್ಟಿ ಮಾಡಿ, ಅಲ್ಲಿನ ಜನರ ಸ್ಥಾಳಾಂತರಕ್ಕೆ ಕ್ರಮ ಕೈಗೊಂಡು, ಸಾವಿರಾರು ಕುಟುಂಬಗಳಿಗೆ ಸ್ಥಳಾಂತರಕ್ಕೆ ನೋಟಿಸ್ ನೀಡಲಾಗಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಈ ಹಿಂದಿನ ವಿಪತ್ತು ವರದಿಗಳು ಮತ್ತು ಸಮೀಕ್ಷೆಗಳ ಆಧಾರದ ಮೇಲೆ ಭಾರತೀಯ ಭೂಗರ್ಭ ಇಲಾಖೆಯು ಪಟ್ಟಿಯನ್ನು ಸಿದ್ದಪಡಿಸಿದ್ದು, ಈ ವರದಿಯನ್ನು ಆಧರಿಸಿ ಕೊಡಗು ಜಿಲ್ಲಾಡಳಿತವು ಭೂಕುಸಿತ ಸಾಧ್ಯತೆ ಇರುವ 104 ಪ್ರದೇಶಗಳನ್ನು ಗುರುತಿಸಿದೆ. ಆಗಸ್ಟ್ ತಿಂಗಳು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತವು ಸಂಭಾವ್ಯ ಭೂಕುಸಿತದ ಪ್ರದೇಶಗಳಲ್ಲಿ ನೆಲೆಗೊಂಡಿರುವ 2,995 ಕುಟುಂಬಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ನೋಟಿಸ್ ಜಾರಿಗೊಳಿಸಿದೆ.

ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸ್ಥಳಾಂತರಿಸಬೇಕಾದ ಕುಟುಂಬಗಳನ್ನು ಜಿಲ್ಲಾಡಳಿತವು ಅಂತಿಮಗೊಳಿಸಿದ್ದು, ಶೀಘ್ರದಲ್ಲೇ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಆಗಬಹುದು ಎಂದು ಮೂಲಗಳು ಹೇಳಿವೆ.

ಸದ್ಯ ಜಿಲ್ಲಾಡಳಿತ 14 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದು, ಇಲ್ಲಿ 200 ಕ್ಕೂ ಹೆಚ್ಚು ಸಂತ್ರಸ್ತರು ಆಶ್ರಯ ಪಡೆದಿದ್ದಾರೆ. ಅಲ್ಲದೆ, ವಿಪತ್ತಿನ ಆತಂಕ ಎದುರಿಸುತ್ತಿರುವ ಪ್ರದೇಶಗಳಲ್ಲಿ 95 ಪರಿಹಾರ ಕೇಂದ್ರಗಳನ್ನು ತೆರೆಯಲು ಸ್ಥಳಗಳ ಪಟ್ಟಿ ಸಿದ್ದಪಡಿಸಲಾಗಿದೆ.

ಮಳೆಯ ಮುನ್ಸೂಚನೆಯನ್ನು ಆಧರಿಸಿ ಭೂಕುಸಿತ ಸಾಧ್ಯತೆ ಇರುವ ಪ್ರದೇಶಗಳಿಂದ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಡಿಸಿ ವೆಂಕಟ್ ರಾಜಾ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈ ವರ್ಷ ಶೇ 24ರಷ್ಟು ಅಧಿಕ ಮಳೆಯಾಗಿದ್ದು, ‌ಪ್ರಸ್ತುತ ಆಗಸ್ಟ್ ತಿಂಗಳು ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

21 mins ago

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

34 mins ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

2 hours ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

2 hours ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

3 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

3 hours ago