ಕೊಡಗು

ಕೊಡಗಿನಲ್ಲಿ ಕೊಂಚ ತಗ್ಗಿದ ವರುಣ: ಇನ್ನೆರಡು ದಿನದಲ್ಲಿ ಸಹಜ ಸ್ಥಿತಿಯತ್ತ

ಕೊಡಗು: ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಭಾರೀ ಅವಾಂತರ ಸೃಷ್ಟಿಸಿದ್ದ ಮಳೆ ಈಗ ಶಾಂತನಾಗಿದ್ದಾನೆ.

ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಹೆಚ್ಚಾಗುವ ಆತಂಕ ದೂರವಾಗಿದೆ. ನಿಧಾನಗತಿಯಲ್ಲಿ ಪ್ರವಾಹ ಇಳಿಮುಖವಾಗುತ್ತಿದ್ದು, ಜನಜೀವನ ಸಹಜ ಸ್ಥಿತಿಯತ್ತ ಮರಳಲು ಇನ್ನೆರಡು ದಿನ ಮಳೆ ಬಿಡುವು ನೀಡಬೇಕಿದೆ.

ಮಡಿಕೇರಿ, ಭಾಗಮಂಡಲ ಸೇರಿದಂತೆ ಅತಿ ಹೆಚ್ಚು ಮಳೆ ಬಿದ್ದ ಪ್ರದೇಶಗಳಲ್ಲಿ ಈಗ ಮಳೆಯ ಪ್ರಮಾಣ ಕಡಿಮೆಯಾಗಿದೆ. ಇನ್ನೆರಡು ದಿನಗಳ ಕಾಲ ಮಳೆ ಕಡಿಮೆಯಾದರಷ್ಟೇ ಪರಿಸ್ಥಿತಿ ಸಹಜ ಸ್ಥಿತಿ ಮರಳಲಿದೆ.

ಇನ್ನೂ ನಿನ್ನೆಯಿಂದ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಸ್ಥಿತಿ ನಿಧಾನವಾಗಿ ಕಡಿಮೆಯಾಗುತ್ತಿದ್ದು, ಜನರು ಕೊಂಚ ನಿರಾಳರಾಗಿದ್ದಾರೆ.

ಇನ್ನೂ ಈ ಬಗ್ಗೆ ಹವಾಮಾನ ಇಲಾಖೆಯು ಮಾಹಿತಿ ನೀಡಿದ್ದು, ಮುಂದಿನ ಐದು ದಿನ ಮಳೆ ಕಳೆದ ವಾರದಷ್ಟು ತೀವ್ರವಾಗಿರುವುದಿಲ್ಲ ಎಂದು ಹೇಳಿದೆ. ಹೀಗಾಗಿ ಜಿಲ್ಲೆಯ ಜನರು ನಿರಾಳರಾಗಿದ್ದು, ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

12 mins ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

19 mins ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

34 mins ago

ಗುಂಡ್ಲುಪೇಟೆ: ಬೇರಂಬಾಡಿ ಬಳಿ ಅರಣ್ಯ ಇಲಾಖೆಯಿಂದ ಹುಲಿ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…

48 mins ago

ಮಂಡ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಗ್ರಾಮಸ್ಥರಿಂದ ದೂರು

ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…

60 mins ago

ನಂಜನಗೂಡಿನಲ್ಲಿ 46 ಮರಗಳ ಹನನ: ಯಶಸ್ವಿಯಾಗಿ ನಡೆದ ಪ್ರತಿಭಟನೆ

ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು…

1 hour ago