ಕೊಡಗು

ವಿರಾಜಪೇಟೆ| ರೆಸಾರ್ಟ್ ಮಾಜಿ ನೌಕರನಿಂದ ಲೈವ್ ಸೂಸೈಡ್ ಬೆದರಿಕೆಯ ವಿಡಿಯೋ: ಕಾರಣ ಇಷ್ಟೇ

ವಿರಾಜಪೇಟೆ: ಇಲ್ಲಿನ ರೆಸಾರ್ಟ್‌ ಮಾಜಿ ನೌಕರರೊಬ್ಬರು ಸೂಸೈಡ್‌ ಮಾಡಿಕೊಳ್ಳುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ.

ಪ್ರವೀಣ ಅರವಿಂದ್‌ ಎಂಬುವವರೇ ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದು, ಪೊಲೀಸರು ಹಾಗೂ ರೆಸಾರ್ಟ್‌ ಮಾಲೀಕರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಹರಿಬಿಟ್ಟಿದ್ದಾರೆ.

ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು ಹೋಗುತ್ತಿದ್ದೇನೆ. ನನಗಾದ ಅನ್ಯಾಯ ಹಾಗೂ ಟಾರ್ಚರ್ ಸಹಿಸಲಾಗುತ್ತಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ಮನೆ ಕಟ್ಟಬಾರದ? ಕಾರು ತೆಗಿಬಾರದಾ? ತಮಿಳುನಾಡಿನಿಂದ ನನ್ನ ಹೆಂಡತಿ ಮಕ್ಕಳನ್ನು ಅರೆಸ್ಟ್ ಮಾಡಿ ಕರೆತರುತ್ತಿದ್ದಾರೆ. ರೆಸಾರ್ಟ್ ನಲ್ಲಿ ಬಾರಿ ಅಕ್ರಮಗಳಾಗಿದೆ. ರೆಸಾರ್ಟ್ ನಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯಲಾಗಿದೆ. ಅರಣ್ಯ ಭೂಮಿ ಅತಿಕ್ರಮಣವಾಗಿದೆ ಎಂದು ಲೈವ್‌ನಲ್ಲಿ ಗಂಭೀರ ಆರೋಪ ಮಾಡಿದ್ದು, ನನ್ನ ದೇಹ ತೆಗೆಯುವ ಮೊದಲು ಅವರು ಅರೆಸ್ಟ್ ಆಗಬೇಕು ಎಂದು ಆಗ್ರಹಿಸಿದ್ದಾರೆ.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಪ್ರವೀಣ್‌ ಲೋಕೇಶನ್‌ ಹುಡುಕುತ್ತಿದ್ದು, ಸಮಸ್ಯೆಗೆ ಪರಿಹಾರ ಹುಡುಕೋಣ. ಯಾವುದೇ ಕಾರಣಕ್ಕೂ ದುಡುಕಬೇಡಿ ಎಂದು ಕಮೆಂಟ್‌ನಲ್ಲಿ ಮನವಿ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

24 mins ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

1 hour ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

3 hours ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

3 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

3 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

4 hours ago