ವಿರಾಜಪೇಟೆ: ಇಲ್ಲಿನ ರೆಸಾರ್ಟ್ ಮಾಜಿ ನೌಕರರೊಬ್ಬರು ಸೂಸೈಡ್ ಮಾಡಿಕೊಳ್ಳುತ್ತೇನೆ ಎಂದು ಫೇಸ್ಬುಕ್ನಲ್ಲಿ ಲೈವ್ ಬಂದಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ.
ಪ್ರವೀಣ ಅರವಿಂದ್ ಎಂಬುವವರೇ ಫೇಸ್ಬುಕ್ನಲ್ಲಿ ಲೈವ್ ಬಂದಿದ್ದು, ಪೊಲೀಸರು ಹಾಗೂ ರೆಸಾರ್ಟ್ ಮಾಲೀಕರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಹರಿಬಿಟ್ಟಿದ್ದಾರೆ.
ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು ಹೋಗುತ್ತಿದ್ದೇನೆ. ನನಗಾದ ಅನ್ಯಾಯ ಹಾಗೂ ಟಾರ್ಚರ್ ಸಹಿಸಲಾಗುತ್ತಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ಮನೆ ಕಟ್ಟಬಾರದ? ಕಾರು ತೆಗಿಬಾರದಾ? ತಮಿಳುನಾಡಿನಿಂದ ನನ್ನ ಹೆಂಡತಿ ಮಕ್ಕಳನ್ನು ಅರೆಸ್ಟ್ ಮಾಡಿ ಕರೆತರುತ್ತಿದ್ದಾರೆ. ರೆಸಾರ್ಟ್ ನಲ್ಲಿ ಬಾರಿ ಅಕ್ರಮಗಳಾಗಿದೆ. ರೆಸಾರ್ಟ್ ನಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯಲಾಗಿದೆ. ಅರಣ್ಯ ಭೂಮಿ ಅತಿಕ್ರಮಣವಾಗಿದೆ ಎಂದು ಲೈವ್ನಲ್ಲಿ ಗಂಭೀರ ಆರೋಪ ಮಾಡಿದ್ದು, ನನ್ನ ದೇಹ ತೆಗೆಯುವ ಮೊದಲು ಅವರು ಅರೆಸ್ಟ್ ಆಗಬೇಕು ಎಂದು ಆಗ್ರಹಿಸಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಪ್ರವೀಣ್ ಲೋಕೇಶನ್ ಹುಡುಕುತ್ತಿದ್ದು, ಸಮಸ್ಯೆಗೆ ಪರಿಹಾರ ಹುಡುಕೋಣ. ಯಾವುದೇ ಕಾರಣಕ್ಕೂ ದುಡುಕಬೇಡಿ ಎಂದು ಕಮೆಂಟ್ನಲ್ಲಿ ಮನವಿ ಮಾಡಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…