ಕೊಡಗು

ರೀಲ್ಸ್‌ಗಾಗಿ ಲಾಂಗ್‌ ಪ್ರದರ್ಶನ : ಮೂವರ ವಿರುದ್ಧ ದೂರು ದಾಖಲಲು

ಮಡಿಕೇರಿ : ರೀಲ್ಸ್ ಹುಚ್ಚಿಗೆ ಬಿದ್ದ ಮೂವರು ಯುವಕರು ಬೈಕ್‌ನಲ್ಲಿ ತೆರಳುವಾಗ ಲಾಂಗ್ ಪ್ರದರ್ಶನ ಮಾಡಿ ಪ್ರಕರಣ ದಾಖಲಿಸಿಕೊಂಡು ಬಂಧನಕೊಳ್ಳಗಾಗಿರುವ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮೂವರು ಯುವಕರ ಪೈಕಿ ಓರ್ವ ರೀಲ್ಸ್‌ಗಾಗಿ ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ತೆಗೆದಿದ್ದಾನೆ. ಅಲ್ಲದೆ, ಇದರ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾನೆ.

ವಿಡಿಯೋ ಗಮನಸಿದ ಕುಶಾಲನಗರ ಗ್ರಾಮಾಂತರ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯಡಿ ಮರೂರು ಗ್ರಾಮದ ಸೂರ್ಯ, ಚಿಕ್ಕ ಅಳುವಾರದ ಪುನೀತ್, ಹೆಬ್ಬಾಲೆಯ ಶ್ರೀಧರ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸೂರ್ಯ ಹಾಗೂ ಪುನೀತ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರೆ, ಶೀಧರ ಎಂಬ ಯುವಕ ತಲೆಮರೆಸಿಕೊಂಡಿದ್ದು ಪರಾರಿಯಾದ ಯುವಕನಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

8 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

9 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

9 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

9 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

10 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

10 hours ago