ಮಡಿಕೇರಿ : ರೀಲ್ಸ್ ಹುಚ್ಚಿಗೆ ಬಿದ್ದ ಮೂವರು ಯುವಕರು ಬೈಕ್ನಲ್ಲಿ ತೆರಳುವಾಗ ಲಾಂಗ್ ಪ್ರದರ್ಶನ ಮಾಡಿ ಪ್ರಕರಣ ದಾಖಲಿಸಿಕೊಂಡು ಬಂಧನಕೊಳ್ಳಗಾಗಿರುವ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮೂವರು ಯುವಕರ ಪೈಕಿ ಓರ್ವ ರೀಲ್ಸ್ಗಾಗಿ ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ತೆಗೆದಿದ್ದಾನೆ. ಅಲ್ಲದೆ, ಇದರ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾನೆ.
ವಿಡಿಯೋ ಗಮನಸಿದ ಕುಶಾಲನಗರ ಗ್ರಾಮಾಂತರ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯಡಿ ಮರೂರು ಗ್ರಾಮದ ಸೂರ್ಯ, ಚಿಕ್ಕ ಅಳುವಾರದ ಪುನೀತ್, ಹೆಬ್ಬಾಲೆಯ ಶ್ರೀಧರ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸೂರ್ಯ ಹಾಗೂ ಪುನೀತ್ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರೆ, ಶೀಧರ ಎಂಬ ಯುವಕ ತಲೆಮರೆಸಿಕೊಂಡಿದ್ದು ಪರಾರಿಯಾದ ಯುವಕನಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…