ಕೊಡಗು

ಮಡಿಕೇರಿ | ಭತ್ತದ ಲೋಡ್‌ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ

ಮಡಿಕೇರಿ: ಈಚರ್‌ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲದಲ್ಲಿ ನಡೆದಿದೆ.

ಹೆಚ್ ಡಿ ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಏಕಾ ಏಕಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ರಸ್ತೆ ಪಕ್ಕ ನಿಲ್ಲಿಸಿ, ಕೆಳಗಿಳಿದಿದ್ದಾರೆ.

ಈ ಘಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಹಲವು ತಾಸುಗಳ ತನಕ ರಸ್ತೆ ತಡೆ ಉಂಟಾಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜ.9ರಿಂದ ಮೈಸೂರಲ್ಲಿ ʻದೇಸಿ ಎಣ್ಣೆ ಮೇಳʼ

ಮೈಸೂರು : ಸಾಂಪ್ರದಾಯಿಕ ಎಣ್ಣೆಗಳ ಕೃಷಿ ಮತ್ತು ಬಳಕೆಯ ಬಗ್ಗೆ ರೈತರು ಮತ್ತು ಗ್ರಾಹಕರಿಗೆ ಅರಿವು ಮೂಡಿಸಲು, ಸಹಜ ಸಮೃದ್ಧ…

1 hour ago

ಟ್ರಂಪ್‌ ನಡೆಗೆ ಖಂಡನೆ ; ವೆನೆಜುವೆಲಾ ಅಧ್ಯಕ್ಷರ ಬಿಡುಗಡೆಗೆ ಆಗ್ರಹ

ಮೈಸೂರು : ವೆನೆಜುವೆಲಾ ಅಧ್ಯಕ್ಷರ ಬಂಧನ ಖಂಡಿಸಿ, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದ)…

1 hour ago

ಮೈಸೂರು | ವಸ್ತುಪ್ರದರ್ಶನದಲ್ಲಿ ಡ್ರಾಗನ್‌ ಬೋಟಿಂಗ್‌

ಮೈಸೂರು : ಮೈಸೂರು ನಗರಿಯೂ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಸ್ಥಳವಾಗಿದ್ದು, ಮೃಗಾಲಯ, ಚಾಮುಂಡಿ ಬೆಟ್ಟ, ಅರಮನೆ ಹೀಗೆ ಇಲ್ಲಿನ…

1 hour ago

ಹಿರಿಯ ಪತ್ರಕರ್ತ ರಾಜಕುಮಾರ್‌ ಬಾಹುಸಾರ್‌ ಇನ್ನಿಲ್ಲ

ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ…

2 hours ago

ಬಹುಮಹಡಿ ಕಟ್ಟಡ, ಮನೆ ನಿರ್ಮಾಣಕ್ಕೆ ಕಡಿವಾಣ ಹಾಕಿ : ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಾಗರಿಕರ ಆಗ್ರಹ

ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’…

3 hours ago

ಬೆಂಗಳೂರು ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ ಹೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ…

4 hours ago