ಕೊಡಗು

ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ದಲಿತ ಯುವತಿ ಸಾವು

ಮಡಿಕೇರಿ: ಒಕ್ಕಲಿಗ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾದ ದಲಿತ ಯುವತಿಯೊಬ್ಬಳು ಮೂರೇ ದಿನಕ್ಕೆ ಸಾವಿಗೀಡಾಗಿದ್ದಾಳೆ. ಪತಿ ಹಾಗೂ ಆತನ ಕುಟುಂಬದವರ ವಿರುದ್ಧ ಮೃತ ಪತ್ನಿಯ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸಮೀಪದ ೭ನೇ ಹೊಸಕೋಟೆ ಎಂಬಲ್ಲಿ ಈ ಘಟನೆ ನಡೆದಿದೆ. ಅಕ್ಷಿತಾ (೧೮) ಕೊಲೆಯಾದ ಯುವತಿ. ಮಂಗಳವಾರ ಸಂಜೆ ಅನುಮಾನಾಸ್ಪದವಾಗಿ ಸಾವು ಸಂಭವಿಸಿದೆ. ಅದೇ ಗ್ರಾಮದ ಹೇಮಂತ್ ಎಂಬ ಒಕ್ಕಲಿಗ ಯುವಕನನ್ನು ಈಕೆ ಪ್ರೀತಿಸಿ ಮದುವೆಯಾಗಿದ್ದಳು. ಮೂರು ದಿನಗಳ ಹಿಂದೆ ಇಬ್ಬರೂ ದೇವಾಲಯದಲ್ಲಿ ಮದುವೆಯಾಗಿ ಬಂದಿದ್ದರು. ಇದರಿಂದ ಹೇಮಂತ್‌ನ ಪೋಷಕರು ಅಸಮಾಧಾನಗೊಂಡಿದ್ದರು. ದಲಿತ ಯುವತಿ ತಮ್ಮ ಮಗನನ್ನು ಮದುವೆಯಾದುದು ಅವರಿಗೆ ಇಷ್ಟವಿರಲಿಲ್ಲ. ಆಕೆಯನ್ನು ಸಾಯಿಸಿಬಿಡುವುದಾಗಿ ಹೇಳಿದ್ದರು ಎಂದು ಅಕ್ಷಿತಾ ಕುಟುಂಬಸ್ಥರು ಆರೋಪಿಸಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

3 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

3 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

4 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

4 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

4 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

4 hours ago