ಮಡಿಕೇರಿ: ಒಕ್ಕಲಿಗ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾದ ದಲಿತ ಯುವತಿಯೊಬ್ಬಳು ಮೂರೇ ದಿನಕ್ಕೆ ಸಾವಿಗೀಡಾಗಿದ್ದಾಳೆ. ಪತಿ ಹಾಗೂ ಆತನ ಕುಟುಂಬದವರ ವಿರುದ್ಧ ಮೃತ ಪತ್ನಿಯ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸಮೀಪದ ೭ನೇ ಹೊಸಕೋಟೆ ಎಂಬಲ್ಲಿ ಈ ಘಟನೆ ನಡೆದಿದೆ. ಅಕ್ಷಿತಾ (೧೮) ಕೊಲೆಯಾದ ಯುವತಿ. ಮಂಗಳವಾರ ಸಂಜೆ ಅನುಮಾನಾಸ್ಪದವಾಗಿ ಸಾವು ಸಂಭವಿಸಿದೆ. ಅದೇ ಗ್ರಾಮದ ಹೇಮಂತ್ ಎಂಬ ಒಕ್ಕಲಿಗ ಯುವಕನನ್ನು ಈಕೆ ಪ್ರೀತಿಸಿ ಮದುವೆಯಾಗಿದ್ದಳು. ಮೂರು ದಿನಗಳ ಹಿಂದೆ ಇಬ್ಬರೂ ದೇವಾಲಯದಲ್ಲಿ ಮದುವೆಯಾಗಿ ಬಂದಿದ್ದರು. ಇದರಿಂದ ಹೇಮಂತ್ನ ಪೋಷಕರು ಅಸಮಾಧಾನಗೊಂಡಿದ್ದರು. ದಲಿತ ಯುವತಿ ತಮ್ಮ ಮಗನನ್ನು ಮದುವೆಯಾದುದು ಅವರಿಗೆ ಇಷ್ಟವಿರಲಿಲ್ಲ. ಆಕೆಯನ್ನು ಸಾಯಿಸಿಬಿಡುವುದಾಗಿ ಹೇಳಿದ್ದರು ಎಂದು ಅಕ್ಷಿತಾ ಕುಟುಂಬಸ್ಥರು ಆರೋಪಿಸಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…