ಕೊಡಗು

ಮಾರ್ಚ್.‌3ರಂದು ಚಂದ್ರಗ್ರಹಣ: ದೇವಾಲಯ ದರ್ಶನ ಸಮಯ ಬದಲು

ಕೊಡಗು: ಮಾರ್ಚ್.‌3ರಂದು ಈ ವರ್ಷದ ಮೊದಲ ಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ.

ಆಗಸದಲ್ಲಿ ನಡೆಯಲಿರುವ ಅಪರೂಪದ ವಿದ್ಯಾಮಾನ ಇದಾಗಿದ್ದು, ಈ ಗ್ರಹಣದ ಹಿನ್ನೆಲೆಯಲ್ಲಿ ವಿವಿಧ ದೇವಾಲಯಗಳ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಈ ಚಂದ್ರಗ್ರಹಣವು ವರ್ಷದ ಅತ್ಯಂತ ದೀರ್ಘವಾದ ಗ್ರಹಣವಾಗಿದೆ. ಮಾರ್ಚ್.‌3ರ ಮಂಗಳವಾರ ಮಧ್ಯಾಹ್ನ 3.20ಕ್ಕೆ ಚಂದ್ರಗ್ರಹಣ ಆರಂಭವಾಗಲಿದೆ. ಸಂಜೆ 6.47ಕ್ಕೆ ಕೊನೆಗೊಳ್ಳಲಿದೆ. ಈ ಚಂದ್ರಗ್ರಹಣದ ಅವಧಿ 3 ಗಂಟೆ 27 ನಿಮಿಷಗಳು.

ಚಂದ್ರಗ್ರಹಣದ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 9ರಿಂದ ರಾತ್ರಿ 7.15ರವರೆಗೆ ಸಾರ್ವಜನಿಕರಿಗೆ ದೇವರ ದರ್ಶನ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಈ ದಿನದಿಂದ ಯಾವುದೇ ಪಿಂಡಪ್ರಧಾನ, ಪಿತೃ ಕಾರ್ಯಗಳು, ಹುಣ್ಣಿಮೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಭಕ್ತಾದಿಗಳಿಗೆ ಅನ್ನದಾಸೋಹ ಇರುವುದಿಲ್ಲ. ಅಂತೆಯೇ ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಿಗ್ಗೆ 9ರಿಂದ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಇರುವುದಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago